BREAKING NEWS

‌ವಂಚನೆ ಆರೋಪ : ಸಿಸಿಬಿ ಪೊಲೀಸರ ಅತಿಥಿಯಾದ ಚೈತ್ರಾ ಕುಂದಾಪುರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ ರೋಚಕವಾಗಿದ್ದು, ಚೈತ್ರಾ ಕುಂದಾಪುರ ಸ್ವತಃ ತಾವೇ ಮೂವರು ಕೇಂದ್ರ ಬಿಜೆಪಿ ನಾಯಕರನ್ನು ಸೃಷ್ಟಿಸಿ ಉದ್ಯಮಿಯನ್ನು ನಂಬಿಸಿರುವುದು ಬಯಲಾಗಿದೆ.

ತನಗೆ ಬಿಜೆಪಿಯ ಕೇಂದ್ರ ನಾಯಕರು ಹಾಗೂ ಆರ್ ಎಸ್ ಎಸ್ ವರಿಷ್ಠರು ಪರಿಚಯ ಎಂದು ಹಂತ ಹಂತವಾಗಿ ಏಳು ಕೋಟಿ ರೂಪಾಯಿಯನ್ನು ಉದ್ಯಮಿಯಿಂದ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ವ್ಯವಸ್ಥಿತ ಪ್ಲಾನ್‌ ಮಾಡಿದ್ದ ಚೈತ್ರಾ ನಕಲಿ ಕೇಂದ್ರದ ನಾಯಕರನ್ನೇ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ. ಸಲೂನ್ ಕೆಲಸಗಾರರು, ಕಬಾಬ್ ಮಾರುವವರನ್ನೇ ಬಿಜೆಪಿಯ ಕೇಂದ್ರದ ನಾಯಕರು ಎಂದು ಉದ್ಯಮಿಗೆ ನಂಬಿಸಿದ್ದರು ಎಂದು ಹೇಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್‌ ಒಂದರಲ್ಲಿ ಮೇಕಪ್‌ ಮಾಡುವ ರಮೇಶ್‌ ಹಾಗೂ ಧನರಾಜ್ ಎಂಬವರನ್ನು ಆರ್‌ಎಸ್‌ಎಸ್‌ ಪ್ರಚಾರಕರು ಎಂದು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಪರಿಚಯ ಮಾಡಿಸಲಾಗಿತ್ತು. ಅದಲ್ಲದೇ ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯ ಮಾಡಿ ಉದ್ಯಮಿಯನ್ನು ಮೋಸದ ಬಲೆಗೆ ಚೈತ್ರಾ ಕುಂದಾಪುರ ಸಿಲುಕಿಸಿದ್ದರು ಎಂದು ತಿಳಿದುಬಂದಿದೆ.

ನಕಲಿ ಪಾತ್ರದಾರಿಗಳಿಗೆ ಕಡೂರಿನ ಮನೆಯೊಂದರಲ್ಲಿ ಚೈತ್ರಾ ಕುಂದಾಪುರ ತರಬೇತಿ ನೀಡಿದ್ದರು ಎನ್ನಲಾಗಿದೆ. ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಕುಂದಾಪುರ ಮತ್ತು ಗಗನ್ 93 ಸಾವಿರ ರೂಪಾಯಿಯನ್ನು ನೀಡಿದ್ದರು. ಇನ್ನು, ಈ ನಾಟಕ ಮಾಡಲು ಗಗನ್ ಮತ್ತು ಧನರಾಜ್ ತಲಾ 1.20 ಲಕ್ಷ ರೂಪಾಯಿಯನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಜೊತೆಗೆ ಆರ್‌ ಎಸ್ಎಸ್ ಸಂಘಟನೆ ಹೆಸರಿನ ಕಾರ್‌ ಬಳಸಲು 2 ಲಕ್ಷ ರೂ. ಅನ್ನು ಸಹ ನೀಡಲಾಗಿತ್ತು ಎಂದು ತಿಳಿದುಬಂದಿದೆ.

lokesh

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

7 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

8 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

11 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

13 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

14 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

15 hours ago