BREAKING NEWS

‌ವಂಚನೆ ಆರೋಪ : ಸಿಸಿಬಿ ಪೊಲೀಸರ ಅತಿಥಿಯಾದ ಚೈತ್ರಾ ಕುಂದಾಪುರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ ರೋಚಕವಾಗಿದ್ದು, ಚೈತ್ರಾ ಕುಂದಾಪುರ ಸ್ವತಃ ತಾವೇ ಮೂವರು ಕೇಂದ್ರ ಬಿಜೆಪಿ ನಾಯಕರನ್ನು ಸೃಷ್ಟಿಸಿ ಉದ್ಯಮಿಯನ್ನು ನಂಬಿಸಿರುವುದು ಬಯಲಾಗಿದೆ.

ತನಗೆ ಬಿಜೆಪಿಯ ಕೇಂದ್ರ ನಾಯಕರು ಹಾಗೂ ಆರ್ ಎಸ್ ಎಸ್ ವರಿಷ್ಠರು ಪರಿಚಯ ಎಂದು ಹಂತ ಹಂತವಾಗಿ ಏಳು ಕೋಟಿ ರೂಪಾಯಿಯನ್ನು ಉದ್ಯಮಿಯಿಂದ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ವ್ಯವಸ್ಥಿತ ಪ್ಲಾನ್‌ ಮಾಡಿದ್ದ ಚೈತ್ರಾ ನಕಲಿ ಕೇಂದ್ರದ ನಾಯಕರನ್ನೇ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ. ಸಲೂನ್ ಕೆಲಸಗಾರರು, ಕಬಾಬ್ ಮಾರುವವರನ್ನೇ ಬಿಜೆಪಿಯ ಕೇಂದ್ರದ ನಾಯಕರು ಎಂದು ಉದ್ಯಮಿಗೆ ನಂಬಿಸಿದ್ದರು ಎಂದು ಹೇಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್‌ ಒಂದರಲ್ಲಿ ಮೇಕಪ್‌ ಮಾಡುವ ರಮೇಶ್‌ ಹಾಗೂ ಧನರಾಜ್ ಎಂಬವರನ್ನು ಆರ್‌ಎಸ್‌ಎಸ್‌ ಪ್ರಚಾರಕರು ಎಂದು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಪರಿಚಯ ಮಾಡಿಸಲಾಗಿತ್ತು. ಅದಲ್ಲದೇ ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯ ಮಾಡಿ ಉದ್ಯಮಿಯನ್ನು ಮೋಸದ ಬಲೆಗೆ ಚೈತ್ರಾ ಕುಂದಾಪುರ ಸಿಲುಕಿಸಿದ್ದರು ಎಂದು ತಿಳಿದುಬಂದಿದೆ.

ನಕಲಿ ಪಾತ್ರದಾರಿಗಳಿಗೆ ಕಡೂರಿನ ಮನೆಯೊಂದರಲ್ಲಿ ಚೈತ್ರಾ ಕುಂದಾಪುರ ತರಬೇತಿ ನೀಡಿದ್ದರು ಎನ್ನಲಾಗಿದೆ. ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಕುಂದಾಪುರ ಮತ್ತು ಗಗನ್ 93 ಸಾವಿರ ರೂಪಾಯಿಯನ್ನು ನೀಡಿದ್ದರು. ಇನ್ನು, ಈ ನಾಟಕ ಮಾಡಲು ಗಗನ್ ಮತ್ತು ಧನರಾಜ್ ತಲಾ 1.20 ಲಕ್ಷ ರೂಪಾಯಿಯನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಜೊತೆಗೆ ಆರ್‌ ಎಸ್ಎಸ್ ಸಂಘಟನೆ ಹೆಸರಿನ ಕಾರ್‌ ಬಳಸಲು 2 ಲಕ್ಷ ರೂ. ಅನ್ನು ಸಹ ನೀಡಲಾಗಿತ್ತು ಎಂದು ತಿಳಿದುಬಂದಿದೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago