BREAKING NEWS

ವಂಚನೆ ಪ್ರಕರಣ : ಚೈತ್ರಾ ಹಾಗೂ ಶ್ರೀಕಾಂತ್‌ ಗೆ ಶರತ್ತುಬದ್ದ ಜಾಮೀನು

ಬೆಂಗಳೂರು : ಬಿಜೆಪಿಯಿಂದ ವಿಧಾನಸಭಾ ಚುನಾವಣೆಯ ಟಿಕೆಟ್‌ ಕೊಡುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚೈತ್ರ ಹಾಗೂ ಶ್ರೀಕಾಂತ್‌ ಅವರಿಗೆ ಶರತ್ತುಬದ್ದ ಜಾಮೀನು ಮಂಜೂರಾಗಿದೆ.

ನಾಳೆ ಆರೋಪಿಗಳಿಬ್ಬರು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟಂಬರ್‌ 13 ರಂದು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು.

ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಗೋವಿಂದ ಬಾಬು ಪೂಜಾರಿ ಅವರಿಂದ ಚೈತ್ರಾ ಸುಮಾರು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದ ಬಾಬು ಅವರಿಗೆ ಟಿಕೆಟ್‌ ಸಿಗಲಿಲ್ಲ ಹಾಗಾಗಿ ಗೋವಿಂದ ಬಾಬು ಚೈತ್ರಾಳಿಗೆ ಕೊಟ್ಟಿದ್ದ ಹಣವನ್ನು ವಾಪಸ್‌ ಕೇಳಿದ್ದಾರೆ. ಆಗ ಚೈತ್ರಾ ಮತ್ತವಳ ಗ್ಯಾಂಗ್‌ ಹಣ ವಾಪಸ್‌ ನೀಡದೇ ವಂಚನೆ ಮಾಡಿತ್ತು. ಈ ಕುರಿತು ಗೋವಿಂದ ಬಾಬು ಪೂಜಾರಿ ದೂರು ನೀಡಿದ್ದರು. ಆ ದೂರಿನ ಆಧಾರದ ಮೇರೆಗೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಅರೆಸ್ಟ್‌ ಮಾಡಿದ್ದರು.

ಇದೀಗ ಎ1 ಆರೋಪಿ ಚೈತ್ರ ಹಾಗೂ ಎ2 ಆರೋಪಿ ಶ್ರೀಕಾಂತ್ ಗೆ ನ್ಯಾಯಾಲಯ ಶರತ್ತುಬದ್ದ ಜಾಮೀನು ನೀಡಿದ್ದು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

52 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

54 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

56 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

58 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago