ಬೆಂಗಳೂರು : ಬಿಜೆಪಿಯಿಂದ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚೈತ್ರ ಹಾಗೂ ಶ್ರೀಕಾಂತ್ ಅವರಿಗೆ ಶರತ್ತುಬದ್ದ ಜಾಮೀನು ಮಂಜೂರಾಗಿದೆ.
ನಾಳೆ ಆರೋಪಿಗಳಿಬ್ಬರು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟಂಬರ್ 13 ರಂದು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು.
ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋವಿಂದ ಬಾಬು ಪೂಜಾರಿ ಅವರಿಂದ ಚೈತ್ರಾ ಸುಮಾರು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದ ಬಾಬು ಅವರಿಗೆ ಟಿಕೆಟ್ ಸಿಗಲಿಲ್ಲ ಹಾಗಾಗಿ ಗೋವಿಂದ ಬಾಬು ಚೈತ್ರಾಳಿಗೆ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ್ದಾರೆ. ಆಗ ಚೈತ್ರಾ ಮತ್ತವಳ ಗ್ಯಾಂಗ್ ಹಣ ವಾಪಸ್ ನೀಡದೇ ವಂಚನೆ ಮಾಡಿತ್ತು. ಈ ಕುರಿತು ಗೋವಿಂದ ಬಾಬು ಪೂಜಾರಿ ದೂರು ನೀಡಿದ್ದರು. ಆ ದೂರಿನ ಆಧಾರದ ಮೇರೆಗೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಅರೆಸ್ಟ್ ಮಾಡಿದ್ದರು.
ಇದೀಗ ಎ1 ಆರೋಪಿ ಚೈತ್ರ ಹಾಗೂ ಎ2 ಆರೋಪಿ ಶ್ರೀಕಾಂತ್ ಗೆ ನ್ಯಾಯಾಲಯ ಶರತ್ತುಬದ್ದ ಜಾಮೀನು ನೀಡಿದ್ದು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…