ಬೆಂಗಳೂರು : ಬಿಜೆಪಿಯಿಂದ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚೈತ್ರ ಹಾಗೂ ಶ್ರೀಕಾಂತ್ ಅವರಿಗೆ ಶರತ್ತುಬದ್ದ ಜಾಮೀನು ಮಂಜೂರಾಗಿದೆ.
ನಾಳೆ ಆರೋಪಿಗಳಿಬ್ಬರು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟಂಬರ್ 13 ರಂದು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು.
ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋವಿಂದ ಬಾಬು ಪೂಜಾರಿ ಅವರಿಂದ ಚೈತ್ರಾ ಸುಮಾರು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದ ಬಾಬು ಅವರಿಗೆ ಟಿಕೆಟ್ ಸಿಗಲಿಲ್ಲ ಹಾಗಾಗಿ ಗೋವಿಂದ ಬಾಬು ಚೈತ್ರಾಳಿಗೆ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ್ದಾರೆ. ಆಗ ಚೈತ್ರಾ ಮತ್ತವಳ ಗ್ಯಾಂಗ್ ಹಣ ವಾಪಸ್ ನೀಡದೇ ವಂಚನೆ ಮಾಡಿತ್ತು. ಈ ಕುರಿತು ಗೋವಿಂದ ಬಾಬು ಪೂಜಾರಿ ದೂರು ನೀಡಿದ್ದರು. ಆ ದೂರಿನ ಆಧಾರದ ಮೇರೆಗೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಅರೆಸ್ಟ್ ಮಾಡಿದ್ದರು.
ಇದೀಗ ಎ1 ಆರೋಪಿ ಚೈತ್ರ ಹಾಗೂ ಎ2 ಆರೋಪಿ ಶ್ರೀಕಾಂತ್ ಗೆ ನ್ಯಾಯಾಲಯ ಶರತ್ತುಬದ್ದ ಜಾಮೀನು ನೀಡಿದ್ದು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…