BREAKING NEWS

ಚಂದಾದಾರಿಕೆ ಹೆಸರಿನಲ್ಲಿ ವಂಚನೆ ಗಾಳ : ಇಂಡಿಯನ್ ಮನಿ ಕಂಪನಿ ವಿರುದ್ಧ 6 ಎಫ್‌ಐಆರ್

ಬೆಂಗಳೂರು: ಹಣಕಾಸು ವಿಷಯದಲ್ಲಿ ಸಲಹೆ ನೀಡುವ ಉದ್ದೇಶವಿಟ್ಟುಕೊಂಡಿದ್ದ ‘ಇಂಡಿಯನ್ ಮನಿ ಡಾಟ್ ಕಾಮ್’ಕಂಪನಿ, ಹಲವು ಸಾಧಕರ ಹೆಸರು ಹಾಗೂ ಅವರಿಂದ ತರಬೇತಿ ಕೊಡಿಸುವ ನೆಪದಲ್ಲಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ಹಣ ಪಡೆದು ವಂಚಿಸಿರುವ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.

ಅರೆಕಾಲಿಕ ಕೆಲಸದ ಹೆಸರಿನಲ್ಲಿ ಯುವಕ– ಯುವತಿಯರನ್ನು ವಂಚಿಸಿರುವ ಪ್ರಕರಣದ ತನಿಖೆ ಕೈಗೊಂಡಿರುವ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ರಘು ಅವರನ್ನು ಬಂಧಿಸಿದ್ದಾರೆ. ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಪೊಲೀಸರು ತಯಾರಿ ಆರಂಭಿಸಿದ್ದಾರೆ.

ಕಂಪನಿಯ ಆಮಿಷಕ್ಕೆ ಒಳಗಾಗಿ ಕೆಲ ತಿಂಗಳು ಕೆಲಸ ಮಾಡಿ ವಂಚನೆಗೀಡಾಗಿದ್ದ ಯುವಕ–ಯುವತಿಯರು ಬನಶಂಕರಿ ಠಾಣೆಯಲ್ಲಿ ಏಪ್ರಿಲ್ 4ರಂದು ದೂರು ದಾಖಲಿಸಿದ್ದರು. ಬಂಧನ ಭೀತಿಯಲ್ಲಿದ್ದ ಸುಧೀರ್ ಹಾಗೂ ಇತರರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಇದರ ಮಧ್ಯೆಯೇ ಕಂಪನಿಯ ಕೆಲ ಉದ್ಯೋಗಿಗಳು ಪ್ರತ್ಯೇಕ ದೂರು ನೀಡಿದ್ದಾರೆ. ಇದರನ್ವಯ ಹೊಸದಾಗಿ ಐದು ಎಫ್‌ಐಆರ್‌ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸುಧೀರ್ ಹಾಗೂ ರಘು ಬಂಧನವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

‘ಕೆಲಸ ಮಾಡುವ ಉದ್ಯೋಗಿಗಳು ಮಾತ್ರವಲ್ಲದೇ, ಜನರಿಗೂ ಕಂಪನಿಯಿಂದ ವಂಚನೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿಯುತ್ತಿದೆ. ವಂಚನೆ ಉದ್ದೇಶದಿಂದಲೇ ಕಂಪನಿಯವರು ‘ಫ್ರೀಡಂ ಆ್ಯಪ್‌’ ಅಭಿವೃದ್ಧಿಪಡಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕ್ರಮವಾಗಿ 6 ಎಫ್‌ಐಆರ್‌ಗಳು ದಾಖಲಾಗಿದ್ದು, ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆಗಿರುವ ಅನುಮಾನವಿದೆ. ತನಿಖೆ ಹೊಣೆಯನ್ನು ಸಿಸಿಬಿಗೆ ವಹಿಸಲು ಚಿಂತನೆ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ರೈತರು, ಅಧಿಕಾರಿಗಳ ಹೆಸರು ದುರ್ಬಳಕೆ: ‘ಕೃಷಿಯಲ್ಲಿ ಸಾಧನೆ ಮಾಡಿರುವ ರೈತರು ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಧಿಕಾರಿಯಾದವರ ಹೆಸರನ್ನು ಕಂಪನಿ ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ’ ಎಂದು ಪೊಲೀಸರು ಹೇಳಿದರು.

‘ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ ಫೋಟೊ ಹಾಗೂ ಹೆಸರು ಹೇಳಿಕೊಂಡು ಅಮಾಯಕ ಯುವಕರ ದಿಕ್ಕು ತಪ್ಪಿಸಲಾಗಿದೆ. ಚನ್ನಣ್ಣನವರ ರೀತಿಯಲ್ಲಿ ನೀವೂ ಐಪಿಎಸ್ ಅಧಿಕಾರಿಯಾಗಬಹುದೆಂದು ಹೇಳಿ ತರಬೇತಿ ನೆಪದಲ್ಲಿ ಹಣ ಪಡೆದು ವಂಚಿಸಿರುವ ಮಾಹಿತಿ ಇದೆ. ಈ ಬಗ್ಗೆ ಚನ್ನಣ್ಣನವರ ಅವರಿಂದ ಮಾಹಿತಿ ಪಡೆಯಲಾಗುವುದು’ ಎಂದು ತಿಳಿಸಿದರು.

‘ಕೃಷಿಯಲ್ಲಿ ಲಕ್ಷ ಲಕ್ಷ ಗಳಿಸುವುದು ಹೇಗೆ? ಉದ್ಯಮ ಆರಂಭಿಸುವುದು ಹೇಗೆ? ಮನೆಯಲ್ಲೇ ಕುಳಿತು ದುಡಿಯುವುದು ಹೇಗೆ? ಸ್ಪರ್ಧಾತ್ಮಕ ಪರೀಕ್ಷೆ ಸೇರಿ 30ಕ್ಕೂ ಹೆಚ್ಚು ವಿಷಯಗಳ ಬಗ್ಗೆ ಆ್ಯಪ್‌ ಮೂಲಕ ಕೋರ್ಸ್ ನಡೆಸಲಾಗುತ್ತಿತ್ತು. ಚಂದಾದಾರಿಕೆ ಹೆಸರಿನಲ್ಲಿ ಜನರಿಂದ ಹಣ ಪಡೆದಿದ್ದ ಕಂಪನಿ, ಯಾವುದೇ ತರಬೇತಿ ನೀಡದೇ ವಂಚಿಸಿರುವ ಬಗ್ಗೆ ಉದ್ಯೋಗಿಗಳೇ ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸಾಮಾಜಿಕ ಮಾಧ್ಯಮ ಹಾಗೂ ಇತರೆಡೆ ಜಾಹೀರಾತು ನೀಡಿ, ಜನರನ್ನು ಸೆಳೆಯಲಾಗುತ್ತಿತ್ತು. ನಾನಾ ಆಮಿಷವೊಡ್ಡಿ ಜನರಿಂದ ಹಣ ತುಂಬಿಸಿಕೊಳ್ಳಲಾಗುತ್ತಿತ್ತು. ಕಂಪನಿ ಉದ್ಯೋಗಿಗಳು ಮಾತ್ರ ಈಗ ದೂರು ನೀಡಿದ್ದಾರೆ. ಜನರು ಯಾರಾದರೂ ದೂರು ನೀಡಿದರೆ, ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದರು.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago