ನವದೆಹಲಿ : ದೇಶದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವುದೇ ನಮ್ಮ ಉದ್ದೇಶವಾಗಿದೆ ಎಂದು ಚುನಾವಣ ಆಯುಕ್ತ ರಾಜೀವ್ ತಿಳಿಸಿದರು.
ಲೋಕಸಭಾ ಚುನಾವಣ ದಿನಾಂಕ ಘೋಷಣೆ ಮಾಡಲು ಚುನಾವಣಾ ಆಯೋಗ ವತಿಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.
ಭಾರತದಾದ್ಯಂತ ೯೭ ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರು ೪೯ ಕೋಟಿ ೭೨ ಲಕ್ಷ, ಮಹಿಳಾ ಮತದಾರರು ೪೭ ಕೋಟಿ ೧೫ ಲಕ್ಷ , ನೂರು ವರ್ಷಕ್ಕೂ ಮೇಲ್ಪಟ್ಟವರು ೨ಲಕ್ಷ ೧೮ ಸಾವಿರ, ಮೊದಲ ಬಾರಿ ಮತದಾರರು ೧ ಕೋಟಿ ೮೨ಲಕ್ಷ , ೮೦ ವರ್ಷದ ಮೇಲ್ಪಟ್ಟ ಮತದಾರರು-೧ ಕೋಟಿ ೯೮ಲಕ್ಷ . ೮೮ಲಕ್ಷ ವಿಶೇಷಚೇತನ, ೪೮ಸಾವಿರ ತೃತಿಯಲಿಂಗಿ ಮತದಾರಿದ್ದಾರೆ ಎಂದು ತಿಳಿಸಿದರು.
ಸುಲಭ ಹಾಗೂ ಯಾವುದೇ ಸಮಸ್ಯೆ ಎದುರಾಗದಂತೆ ದೇಶಾದ್ಯಂತ ೧೦.೫ ಲಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ೫೫ ಲಕ್ಷ ಇವಿಎಂ ಮಿಷನ್ ವ್ಯವಸ್ಥೆ ಮಾಡಲಾಗುತ್ತಿದೆ.
ಒಟ್ಟಾರೆ ೧.೫ ಕೋಟಿ ಭದ್ರತಾ ಅಧಿಕಾರಗಿಳ ನಿಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅದಲ್ಲದೇ ೮೦ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನದ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣಾ ಅಧಿಕಾರಿಗಳಾದ ಗ್ಯಾನೇಶ್ ಕುಮಾರ್, ರಾಜೀವ್ ಕುಮಾರ್, ಡಾ ಎಸ್ ಎಸ್ ಸಂದು ಉಪಸ್ಥಿತರಿದ್ದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…