BREAKING NEWS

ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶ : ಮುಖ್ಯ ಚುನಾವಣ ಆಯುಕ್ತ ರಾಜೀವ

ನವದೆಹಲಿ : ದೇಶದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವುದೇ ನಮ್ಮ ಉದ್ದೇಶವಾಗಿದೆ ಎಂದು ಚುನಾವಣ ಆಯುಕ್ತ ರಾಜೀವ್‌ ತಿಳಿಸಿದರು.

ಲೋಕಸಭಾ ಚುನಾವಣ ದಿನಾಂಕ ಘೋಷಣೆ ಮಾಡಲು   ಚುನಾವಣಾ ಆಯೋಗ ವತಿಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿದ್ದ  ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

ಭಾರತದಾದ್ಯಂತ ೯೭ ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರು ೪೯ ಕೋಟಿ ೭೨ ಲಕ್ಷ, ಮಹಿಳಾ ಮತದಾರರು ೪೭ ಕೋಟಿ ೧೫ ಲಕ್ಷ , ನೂರು ವರ್ಷಕ್ಕೂ ಮೇಲ್ಪಟ್ಟವರು ೨ಲಕ್ಷ ೧೮ ಸಾವಿರ, ಮೊದಲ ಬಾರಿ ಮತದಾರರು ೧ ಕೋಟಿ ೮೨ಲಕ್ಷ , ೮೦ ವರ್ಷದ ಮೇಲ್ಪಟ್ಟ ಮತದಾರರು-೧ ಕೋಟಿ ೯೮ಲಕ್ಷ . ೮೮ಲಕ್ಷ ವಿಶೇಷಚೇತನ, ೪೮ಸಾವಿರ ತೃತಿಯಲಿಂಗಿ  ಮತದಾರಿದ್ದಾರೆ ಎಂದು ತಿಳಿಸಿದರು.

ಸುಲಭ ಹಾಗೂ ಯಾವುದೇ ಸಮಸ್ಯೆ ಎದುರಾಗದಂತೆ ದೇಶಾದ್ಯಂತ ೧೦.೫ ಲಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ೫೫ ಲಕ್ಷ ಇವಿಎಂ ಮಿಷನ್‌ ವ್ಯವಸ್ಥೆ ಮಾಡಲಾಗುತ್ತಿದೆ.

ಒಟ್ಟಾರೆ ೧.೫ ಕೋಟಿ ಭದ್ರತಾ ಅಧಿಕಾರಗಿಳ ನಿಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅದಲ್ಲದೇ ೮೦ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನದ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚುನಾವಣಾ ಅಧಿಕಾರಿಗಳಾದ ಗ್ಯಾನೇಶ್‌ ಕುಮಾರ್‌, ರಾಜೀವ್‌ ಕುಮಾರ್‌, ಡಾ ಎಸ್‌ ಎಸ್‌ ಸಂದು ಉಪಸ್ಥಿತರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago