BREAKING NEWS

ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶ : ಮುಖ್ಯ ಚುನಾವಣ ಆಯುಕ್ತ ರಾಜೀವ

ನವದೆಹಲಿ : ದೇಶದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವುದೇ ನಮ್ಮ ಉದ್ದೇಶವಾಗಿದೆ ಎಂದು ಚುನಾವಣ ಆಯುಕ್ತ ರಾಜೀವ್‌ ತಿಳಿಸಿದರು.

ಲೋಕಸಭಾ ಚುನಾವಣ ದಿನಾಂಕ ಘೋಷಣೆ ಮಾಡಲು   ಚುನಾವಣಾ ಆಯೋಗ ವತಿಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿದ್ದ  ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

ಭಾರತದಾದ್ಯಂತ ೯೭ ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರು ೪೯ ಕೋಟಿ ೭೨ ಲಕ್ಷ, ಮಹಿಳಾ ಮತದಾರರು ೪೭ ಕೋಟಿ ೧೫ ಲಕ್ಷ , ನೂರು ವರ್ಷಕ್ಕೂ ಮೇಲ್ಪಟ್ಟವರು ೨ಲಕ್ಷ ೧೮ ಸಾವಿರ, ಮೊದಲ ಬಾರಿ ಮತದಾರರು ೧ ಕೋಟಿ ೮೨ಲಕ್ಷ , ೮೦ ವರ್ಷದ ಮೇಲ್ಪಟ್ಟ ಮತದಾರರು-೧ ಕೋಟಿ ೯೮ಲಕ್ಷ . ೮೮ಲಕ್ಷ ವಿಶೇಷಚೇತನ, ೪೮ಸಾವಿರ ತೃತಿಯಲಿಂಗಿ  ಮತದಾರಿದ್ದಾರೆ ಎಂದು ತಿಳಿಸಿದರು.

ಸುಲಭ ಹಾಗೂ ಯಾವುದೇ ಸಮಸ್ಯೆ ಎದುರಾಗದಂತೆ ದೇಶಾದ್ಯಂತ ೧೦.೫ ಲಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ೫೫ ಲಕ್ಷ ಇವಿಎಂ ಮಿಷನ್‌ ವ್ಯವಸ್ಥೆ ಮಾಡಲಾಗುತ್ತಿದೆ.

ಒಟ್ಟಾರೆ ೧.೫ ಕೋಟಿ ಭದ್ರತಾ ಅಧಿಕಾರಗಿಳ ನಿಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅದಲ್ಲದೇ ೮೦ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನದ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚುನಾವಣಾ ಅಧಿಕಾರಿಗಳಾದ ಗ್ಯಾನೇಶ್‌ ಕುಮಾರ್‌, ರಾಜೀವ್‌ ಕುಮಾರ್‌, ಡಾ ಎಸ್‌ ಎಸ್‌ ಸಂದು ಉಪಸ್ಥಿತರಿದ್ದರು.

andolanait

Recent Posts

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 seconds ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

15 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

20 mins ago