BREAKING NEWS

ಸಣ್ಣ ನೇಕಾರರಿಗೆ 10 ಎಚ್.ಪಿ ವರೆಗೆ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ  ಉಚಿತ ವಿದ್ಯುತ್ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ  ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ  ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ  ಅದನ್ನು ಮನ್ನಾ ಮಾಡಲಾಗುವುದು ಎಂದರು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ  ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ,ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ  ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್  ಉಪಸ್ಥಿತರಿದ್ದರು.

andolanait

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

11 mins ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

38 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

1 hour ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

2 hours ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago