BREAKING NEWS

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ನೋಟಿಸ್

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.

ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆಯಲ್ಲಿ ಸುಪ್ರೀಂಕೋರ್ಟ್ ಈ ನೋಟಿಸ್ ಜಾರಿ ಮಾಡಿತು.

 

ಮತದಾರರಿಗೆ ತೆರಿಗೆ ಹಣದಲ್ಲಿ ಉಚಿತವಾಗಿ ಕೊಡುಗೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರಕ್ಕೂ ಸುಪ್ರೀಂಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಕೇಂದ್ರ, ಚುನಾವಣಾ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನೋಟಿಸ್ ಜಾರಿ ಮಾಡಿದ್ದು, ತೆರಿಗೆದಾರರ ಹಣವನ್ನು ಎರಡು ರಾಜ್ಯ ಸರ್ಕಾರಗಳು ಮತದಾರರ ಆಮಿಷಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿತು.

ಸರ್ಕಾರ ಚುನಾವಣೆಗೂ ಮುನ್ನ ಹಣ ಹಂಚುವುದಕ್ಕಿಂತ ಕ್ರೂರವಾದ ಸಂಗತಿ ಇನ್ನೊಂದಿಲ್ಲ. ಇದು ಪ್ರತಿ ಬಾರಿಯೂ ನಡೆಯುತ್ತಿದ್ದು, ಅಂತಿಮವಾಗಿ ತೆರಿಗೆದಾರರ ಮೇಲೆ ಹೊರೆ ಬೀಳುತ್ತದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.

ನಾಲ್ಕು ವಾರಗಳಲ್ಲಿ ನೋಟಿಸ್ ಗೆ ಪ್ರತಿಕ್ರಿಯಿಸುವಂತೆ  ಪೀಠ ಹೇಳಿದೆ.  ಭಟ್ತುಲಾಲ್ ಜೈನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಈ ವಿಷಯದ ಕುರಿತು ಬಾಕಿ ಉಳಿದಿರುವ ಅರ್ಜಿಯೊಂದಿಗೆ ಅದನ್ನು ಸೇರಿಸಲು ಆದೇಶಿಸಿತು

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago