BREAKING NEWS

ಇನ್ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ ಮಾಡುವುದಾಗಿ ಘೋಷಿಸಿದ್ದಾರೆ.

ಈ ಯೋಜನೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮಾತ್ರ ಮೊಟ್ಟೆ , ಶೇಂಗಾಚಿಕ್ಕಿ ಹಾಗೂ ಬಾಳೆಹಣ್ಣನ್ನು ವಿತರಿಸಲಾಗುತ್ತಿತ್ತು. ಇನ್ನು ಮುಂದೆ ಇದನ್ನು ವಾರದಲ್ಲಿ ಎರಡು ದಿನ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಈ ಯೋಜನೆಯಿಂದ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಉಂಟಾಗುತ್ತದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಈ ಯೋಜನೆಯನ್ನು 9 ಮತ್ತು 10ನೇ ತರಗತಿಯ ವ್ಯಾಸಂಗ ಮಾಡುತ್ತಿರುವ 60 ಲಕ್ಷ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಇದಕ್ಕಾಗಿ 280 ಕೋಟಿ ರೂಪಾಯಿ ಅನುದಾನ ಮೀಸಲಿಡುವುದಾಗಿ ಸಿಎಂ ತಿಳಿಸಿದ್ದಾರೆ.

ಮಕ್ಕಳಲ್ಲಿ ಉಂಟಾಗುವ ಕಲಿಕಾ ನ್ಯೂನತೆಯನ್ನು ನಿವಾರಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಮರುಸಿಂಚನ ಎಂಬ ಯೋಜನೆಯಡಿ ಹಿಂದುಳಿದ 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago