ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಈ ಯೋಜನೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮಾತ್ರ ಮೊಟ್ಟೆ , ಶೇಂಗಾಚಿಕ್ಕಿ ಹಾಗೂ ಬಾಳೆಹಣ್ಣನ್ನು ವಿತರಿಸಲಾಗುತ್ತಿತ್ತು. ಇನ್ನು ಮುಂದೆ ಇದನ್ನು ವಾರದಲ್ಲಿ ಎರಡು ದಿನ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಈ ಯೋಜನೆಯಿಂದ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಉಂಟಾಗುತ್ತದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಈ ಯೋಜನೆಯನ್ನು 9 ಮತ್ತು 10ನೇ ತರಗತಿಯ ವ್ಯಾಸಂಗ ಮಾಡುತ್ತಿರುವ 60 ಲಕ್ಷ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಇದಕ್ಕಾಗಿ 280 ಕೋಟಿ ರೂಪಾಯಿ ಅನುದಾನ ಮೀಸಲಿಡುವುದಾಗಿ ಸಿಎಂ ತಿಳಿಸಿದ್ದಾರೆ.
ಮಕ್ಕಳಲ್ಲಿ ಉಂಟಾಗುವ ಕಲಿಕಾ ನ್ಯೂನತೆಯನ್ನು ನಿವಾರಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಮರುಸಿಂಚನ ಎಂಬ ಯೋಜನೆಯಡಿ ಹಿಂದುಳಿದ 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…