ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.
ʼʼಕುಮಾರಸ್ವಾಮಿ ಅವರ ರಾಜಕೀಯ ಬೆಳವಣಿಗೆಯನ್ನ ಮೊದಲಿನಿಂದ ರಾಷ್ಟ್ರೀಯ ನಾಯಕರು ಗುರುತಿಸಿದ್ದಾರೆ. ಅವರ ನಾಯಕತ್ವಕ್ಕೆ ರಾಷ್ಟ್ರದಲ್ಲಿ ಒಂದು ಮಾನ್ಯತೆ ಸಿಕ್ಕಿದೆ. ನಾವೆಲ್ಲಾ ಒಟ್ಟು ಸೇರಿ ಒಂದು ತೀರ್ಮಾನ ಮಾಡಿದ್ದೇವೆ. ಪಕ್ಷದ ಅಧ್ಯಕ್ಷ ಸ್ಥಾನ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆʼʼ ಎಂದು ಅವರು ಹೇಳಿದರು.
ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ಕುಮಾರಸ್ವಾಮಿ ನೇಮಕ
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…