BREAKING NEWS

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂರನ್ನು ಉಚ್ಚಾಟಿಸಲಾಗಿದೆ: ಎಚ್‌ಡಿಡಿ

ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡ ತಿಳಿಸಿದ್ದಾರೆ.

ಜೆಪಿ ಭವನದಲ್ಲಿ ನಡೆದ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.

ʼʼಕುಮಾರಸ್ವಾಮಿ ಅವರ ರಾಜಕೀಯ ಬೆಳವಣಿಗೆಯನ್ನ ಮೊದಲಿನಿಂದ ರಾಷ್ಟ್ರೀಯ ನಾಯಕರು ಗುರುತಿಸಿದ್ದಾರೆ. ಅವರ ನಾಯಕತ್ವಕ್ಕೆ ರಾಷ್ಟ್ರದಲ್ಲಿ ಒಂದು ಮಾನ್ಯತೆ ಸಿಕ್ಕಿದೆ. ನಾವೆಲ್ಲಾ ಒಟ್ಟು ಸೇರಿ ಒಂದು ತೀರ್ಮಾನ ಮಾಡಿದ್ದೇವೆ. ಪಕ್ಷದ ಅಧ್ಯಕ್ಷ ಸ್ಥಾನ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆʼʼ ಎಂದು ಅವರು ಹೇಳಿದರು.

ʼʼಅಡಹಾಕ್‌ʼʼ ಅಧ್ಯಕ್ಷರನ್ನಾಗಿ ಕುಮಾರಸ್ವಾಮಿ ನೇಮಕ

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ʼʼಅಡಹಾಕ್‌ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

4 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

8 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

8 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

8 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

8 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

11 hours ago