ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಮತ್ತೆ ಉಗ್ರರ ದಾಳಿ ನಡೆದಿದೆ. ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. ಉತ್ತರ ಪ್ರದೇಶದಿಂದ ತೆರಳಿದ್ದ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಸೋಮವಾರ ರಾತ್ರಿ ನಡೆಸಿದ ದಾಳಿಯಲ್ಲಿ ಕೊಂದು ಹಾಕಿದ್ದಾರೆ.
ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತನನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿ ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಶೋಪಿಯಾನ್ನ ಹರ್ಮೆನ್ ಪ್ರದೇಶದಲ್ಲಿ ಸೋಮವಾರ ತಡ ರಾತ್ರಿ, ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕನೊಬ್ಬ ಗ್ರೆನೇಡ್ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಕಾರ್ಮಿಕರನ್ನು ರಾಮ್ ಸಾಗರ್ ಮತ್ತು ಮೊನೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತರ ಪ್ರದೇಶದ ಕನ್ನೌಜ್ ನಿವಾಸಿಗಳಾಗಿದ್ದಾರೆ. ಗ್ರೆನೇಡ್ ಎಸೆದು ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಉಗ್ರನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…