ಉತ್ತರ ಪ್ರದೇಶ/ಅಲಹಾಬಾದ್: ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ತಮ್ಮ ಆಯ್ಕೆಯ ಹೆಸರನ್ನು ಇಟ್ಟುಕೊಳ್ಳಲು ಸಮೀರ್ ರಾವ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್ ಭಾನೋಟ್ ಅವರು ಈ ತೀರ್ಪು ನೀಡಿದ್ದಾರೆ.
ಹೆಸರು ಬದಲಾವಣೆಗೆ ಒಪ್ಪದೇ ಡಿಸೆಂಬರ್ 24, 2020 ರಂದು ಉತ್ತರಪ್ರದೇಶದ ಬರೇಲಿಯ ಮಾಧ್ಯಮಿಕ ಶಿಕ್ಷಾ ಪರಿಷತ್ ನ ಪ್ರಾದೇಶಿಕ ಕಾರ್ಯದರ್ಶಿ ಅವರು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದಾರೆ. ಪರಿಷತ್, ವ್ಯಕ್ತಿಯ ಹೆಸರು ಬದಲಾವಣೆಯ ಅರ್ಜಿಯನ್ನು ತಿರಸ್ಕರಿಸಿತ್ತು.
ಅರ್ಜಿದಾರರ ಹೆಸರನ್ನು ಶಹನವಾಜ್ ಎಂಬ ಹೆಸರಿನ ಬದಲು ಎಂಡಿ ಸಮೀರ್ ರಾವ್ ಎಂದು ಬದಲಾಯಿಸಲು ಮತ್ತು ಹೊಸದಾಗಿ 10 ನೇ ತರಗತಿ ಮತ್ತು 12 ನೇ ತರಗತಿ ಪ್ರಮಾಣಪತ್ರಗಳನ್ನು ಈ ಬದಲಾವಣೆಯ ಹೆಸರಿನೊಂದಿಗೆ ನೀಡಲು ಅರ್ಜಿದಾರರ ಅರ್ಜಿಯನ್ನು ಅನುಮತಿಸುವಂತೆ ಹೈಕೋರ್ಟ್ ಪ್ರತಿವಾದಿಗಳಿಗೆ ನಿರ್ದೇಶಿಸಿದೆ.
ಉತ್ತರಪ್ರದೇಶ ಪ್ರೌಢಶಾಲೆ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಹೈಸ್ಕೂಲ್ ಮತ್ತು ಇಂಟರ್ಮೀಡಿಯೇಟ್ ಪರೀಕ್ಷೆಯ ಪ್ರಮಾಣಪತ್ರಗಳಲ್ಲಿ ಹೆಸರನ್ನು ಬದಲಾಯಿಸಲು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಈ ಕ್ರಮವನ್ನ ಪ್ರಶ್ನಿಸಿದ್ದರು.
ಮೇ 25 ರಂದು ತನ್ನ ತೀರ್ಪಿನಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಆಯ್ಕೆಯ ಹೆಸರನ್ನು ಇಡುವ ಅಥವಾ ವೈಯಕ್ತಿಕ ಆದ್ಯತೆಗೆ ಅನುಗುಣವಾಗಿ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದ ಆರ್ಟಿಕಲ್ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಆರ್ಟಿಕಲ್ 21 (ಜೀವನದ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಮತ್ತು ಆರ್ಟಿಕಲ್ 14 (ಸಮಾನತೆಯ ಹಕ್ಕು) ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತೀರ್ಪು ನೀಡಿದೆ.
ಅರ್ಜಿದಾರರ ಮನವಿ ತಿರಸ್ಕಾರ ಮಾಡಿರುವುದು ಈ ಆರ್ಟಿಕಲ್ ನಡಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ನ್ಯಾಯಾಲಯ ಹೇಳಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…