ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಈ ಕುರಿತು ಆಳವಾದ ತನಿಖೆ ನಡೆಸಲಿದೆ. ತಪ್ಪಿಸ್ಥರ ವಿರುದ್ಧ ಕ್ರಮವಾಗಲಿದೆ. ಪರೀಕ್ಷೆಯ ಭಾಗವನ್ನು ಕೂಡ ವಿಚಾರಣೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಸುಮಾರು 1,000 ಸಬ್ಇನ್ಸ್ಪೆಕ್ಟರ್ಗಳ ಹುದ್ದೆಗಳು ಖಾಲಿ ಇರುವುದರಿಂದ ಪೊಲೀಸ್ ಇಲಾಖೆ ಸಂಕಷ್ಟದಲ್ಲಿದೆ. ಈ ನಡುವಲ್ಲೇ 545 ಸಬ್ಇನ್ಸ್ಪೆಕ್ಟರ್ಗಳ ಬ್ಯಾಚ್ನ ನೇಮಕಾತಿ ಹಗರಣದ ಕೇಳಿ ಬಂದಿದ್ದು, ತನಿಖೆ ನೇಮಕಾತಿ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.
545 ಸಬ್ಇನ್ಸ್ಪೆಕ್ಟರ್ಗಳು ಅವರ ಹಿರಿಯರೇ ಆಗಿರುವುದರಿಂದ 400 ಎಸ್ಐಗಳ ನೇಮಕಾತಿಗೆ ಮುಂದಾಗಲು ಸಾಧ್ಯವಿಲ್ಲ. ಹಗರಣ-ಬಾಧಿತ ನೇಮಕಾತಿ ಪ್ರಕ್ರಿಯೆಯಲ್ಲಿ, ಆಯ್ಕೆಯಾದ ಸಬ್-ಇನ್ಸ್ಪೆಕ್ಟರ್ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ, ಹಗರಣದಲ್ಲಿ ಭಾಗಿಯಾಗಿರುವವರು ಕೇವಲ 40 ಅಭ್ಯರ್ಥಿಗಳು ಮತ್ತು ಇತರರೇಕೆ ಸಂಕಷ್ಟ ಅನುಭವಿಸಬೇಕೆಂದು ವಾದಿಸಿದ್ದಾರೆ.
ಈ ನಡುವೆ ಮರುಪರೀಕ್ಷೆ ನಡೆಸಲು ಅನುಮತಿ ಕೋರಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿದ್ದು, ಉತ್ತೀರ್ಣರಾದವರು ಇದನ್ನು ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿದ್ದೇ ಆದರೆ, ಮತ್ತೊಮ್ಮೆ ಎದುರಿಸುವ ವಿಶ್ವಾಸ ಹೊಂದಿರಬೇಕೆಂದು ನಾವು ಹೇಳುತ್ತಿದ್ದೇವೆ. ಈ ಅಭ್ಯರ್ಥಿಗಳ ಕುರಿತು ಏನು ಮಾಡಬೇಕೆಂಬುದನ್ನು ಚರ್ಚಿಸಲು ಸಭೆಗಳನ್ನು ನಡೆಸಿದ್ದೇವೆ. ಮರು ಪರೀಕ್ಷೆ ನಡೆಸಬೇಕು ಎಂದು ಕೆಲವು ಅಧಿಕಾರಿಗಳು ಸೂಚಿಸಿದ್ದರೂ, ಇಡೀ ಸಮಸ್ಯೆ ನ್ಯಾಯಾಲಯದ ಅಂಗಳದಲ್ಲಿದೆ ಎಂದರು.
ಬಿಟ್ಕಾಯಿನ್ ಹಗರಣದ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದ್ದರೂ, ರಾಜ್ಯ ಸರ್ಕಾರವು ಹೊಸದಾಗಿ ತನಿಖೆ ನಡೆಸಲಿದೆ. ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಹೊರಗಿದ್ದಾನೆ. ಪ್ರಕರಣದಲ್ಲಿ ಹಣ ಕೆಲವು ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…