BREAKING NEWS

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಈ ಕುರಿತು ಆಳವಾದ ತನಿಖೆ ನಡೆಸಲಿದೆ. ತಪ್ಪಿಸ್ಥರ ವಿರುದ್ಧ ಕ್ರಮವಾಗಲಿದೆ. ಪರೀಕ್ಷೆಯ ಭಾಗವನ್ನು ಕೂಡ ವಿಚಾರಣೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸುಮಾರು 1,000 ಸಬ್‌ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇರುವುದರಿಂದ ಪೊಲೀಸ್ ಇಲಾಖೆ ಸಂಕಷ್ಟದಲ್ಲಿದೆ. ಈ ನಡುವಲ್ಲೇ 545 ಸಬ್‌ಇನ್‌ಸ್ಪೆಕ್ಟರ್‌ಗಳ ಬ್ಯಾಚ್‌ನ ನೇಮಕಾತಿ ಹಗರಣದ ಕೇಳಿ ಬಂದಿದ್ದು, ತನಿಖೆ ನೇಮಕಾತಿ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

545 ಸಬ್‌ಇನ್‌ಸ್ಪೆಕ್ಟರ್‌ಗಳು ಅವರ ಹಿರಿಯರೇ ಆಗಿರುವುದರಿಂದ 400 ಎಸ್‌ಐಗಳ ನೇಮಕಾತಿಗೆ ಮುಂದಾಗಲು ಸಾಧ್ಯವಿಲ್ಲ. ಹಗರಣ-ಬಾಧಿತ ನೇಮಕಾತಿ ಪ್ರಕ್ರಿಯೆಯಲ್ಲಿ, ಆಯ್ಕೆಯಾದ ಸಬ್-ಇನ್‌ಸ್ಪೆಕ್ಟರ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ, ಹಗರಣದಲ್ಲಿ ಭಾಗಿಯಾಗಿರುವವರು ಕೇವಲ 40 ಅಭ್ಯರ್ಥಿಗಳು ಮತ್ತು ಇತರರೇಕೆ ಸಂಕಷ್ಟ ಅನುಭವಿಸಬೇಕೆಂದು ವಾದಿಸಿದ್ದಾರೆ.

ಈ ನಡುವೆ ಮರುಪರೀಕ್ಷೆ ನಡೆಸಲು ಅನುಮತಿ ಕೋರಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿದ್ದು, ಉತ್ತೀರ್ಣರಾದವರು ಇದನ್ನು ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿದ್ದೇ ಆದರೆ, ಮತ್ತೊಮ್ಮೆ ಎದುರಿಸುವ ವಿಶ್ವಾಸ ಹೊಂದಿರಬೇಕೆಂದು ನಾವು ಹೇಳುತ್ತಿದ್ದೇವೆ. ಈ ಅಭ್ಯರ್ಥಿಗಳ ಕುರಿತು ಏನು ಮಾಡಬೇಕೆಂಬುದನ್ನು ಚರ್ಚಿಸಲು ಸಭೆಗಳನ್ನು ನಡೆಸಿದ್ದೇವೆ. ಮರು ಪರೀಕ್ಷೆ ನಡೆಸಬೇಕು ಎಂದು ಕೆಲವು ಅಧಿಕಾರಿಗಳು ಸೂಚಿಸಿದ್ದರೂ, ಇಡೀ ಸಮಸ್ಯೆ ನ್ಯಾಯಾಲಯದ ಅಂಗಳದಲ್ಲಿದೆ ಎಂದರು.

ಬಿಟ್‌ಕಾಯಿನ್ ಹಗರಣದ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದ್ದರೂ, ರಾಜ್ಯ ಸರ್ಕಾರವು ಹೊಸದಾಗಿ ತನಿಖೆ ನಡೆಸಲಿದೆ. ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಹೊರಗಿದ್ದಾನೆ. ಪ್ರಕರಣದಲ್ಲಿ ಹಣ ಕೆಲವು ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಿದರು.

 

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

6 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

22 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

39 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

52 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago