BREAKING NEWS

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಈ ಕುರಿತು ಆಳವಾದ ತನಿಖೆ ನಡೆಸಲಿದೆ. ತಪ್ಪಿಸ್ಥರ ವಿರುದ್ಧ ಕ್ರಮವಾಗಲಿದೆ. ಪರೀಕ್ಷೆಯ ಭಾಗವನ್ನು ಕೂಡ ವಿಚಾರಣೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸುಮಾರು 1,000 ಸಬ್‌ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇರುವುದರಿಂದ ಪೊಲೀಸ್ ಇಲಾಖೆ ಸಂಕಷ್ಟದಲ್ಲಿದೆ. ಈ ನಡುವಲ್ಲೇ 545 ಸಬ್‌ಇನ್‌ಸ್ಪೆಕ್ಟರ್‌ಗಳ ಬ್ಯಾಚ್‌ನ ನೇಮಕಾತಿ ಹಗರಣದ ಕೇಳಿ ಬಂದಿದ್ದು, ತನಿಖೆ ನೇಮಕಾತಿ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

545 ಸಬ್‌ಇನ್‌ಸ್ಪೆಕ್ಟರ್‌ಗಳು ಅವರ ಹಿರಿಯರೇ ಆಗಿರುವುದರಿಂದ 400 ಎಸ್‌ಐಗಳ ನೇಮಕಾತಿಗೆ ಮುಂದಾಗಲು ಸಾಧ್ಯವಿಲ್ಲ. ಹಗರಣ-ಬಾಧಿತ ನೇಮಕಾತಿ ಪ್ರಕ್ರಿಯೆಯಲ್ಲಿ, ಆಯ್ಕೆಯಾದ ಸಬ್-ಇನ್‌ಸ್ಪೆಕ್ಟರ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ, ಹಗರಣದಲ್ಲಿ ಭಾಗಿಯಾಗಿರುವವರು ಕೇವಲ 40 ಅಭ್ಯರ್ಥಿಗಳು ಮತ್ತು ಇತರರೇಕೆ ಸಂಕಷ್ಟ ಅನುಭವಿಸಬೇಕೆಂದು ವಾದಿಸಿದ್ದಾರೆ.

ಈ ನಡುವೆ ಮರುಪರೀಕ್ಷೆ ನಡೆಸಲು ಅನುಮತಿ ಕೋರಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿದ್ದು, ಉತ್ತೀರ್ಣರಾದವರು ಇದನ್ನು ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿದ್ದೇ ಆದರೆ, ಮತ್ತೊಮ್ಮೆ ಎದುರಿಸುವ ವಿಶ್ವಾಸ ಹೊಂದಿರಬೇಕೆಂದು ನಾವು ಹೇಳುತ್ತಿದ್ದೇವೆ. ಈ ಅಭ್ಯರ್ಥಿಗಳ ಕುರಿತು ಏನು ಮಾಡಬೇಕೆಂಬುದನ್ನು ಚರ್ಚಿಸಲು ಸಭೆಗಳನ್ನು ನಡೆಸಿದ್ದೇವೆ. ಮರು ಪರೀಕ್ಷೆ ನಡೆಸಬೇಕು ಎಂದು ಕೆಲವು ಅಧಿಕಾರಿಗಳು ಸೂಚಿಸಿದ್ದರೂ, ಇಡೀ ಸಮಸ್ಯೆ ನ್ಯಾಯಾಲಯದ ಅಂಗಳದಲ್ಲಿದೆ ಎಂದರು.

ಬಿಟ್‌ಕಾಯಿನ್ ಹಗರಣದ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದ್ದರೂ, ರಾಜ್ಯ ಸರ್ಕಾರವು ಹೊಸದಾಗಿ ತನಿಖೆ ನಡೆಸಲಿದೆ. ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಹೊರಗಿದ್ದಾನೆ. ಪ್ರಕರಣದಲ್ಲಿ ಹಣ ಕೆಲವು ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಿದರು.

 

andolanait

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

45 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

58 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

1 hour ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

1 hour ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago