BREAKING NEWS

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಈ ಕುರಿತು ಆಳವಾದ ತನಿಖೆ ನಡೆಸಲಿದೆ. ತಪ್ಪಿಸ್ಥರ ವಿರುದ್ಧ ಕ್ರಮವಾಗಲಿದೆ. ಪರೀಕ್ಷೆಯ ಭಾಗವನ್ನು ಕೂಡ ವಿಚಾರಣೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸುಮಾರು 1,000 ಸಬ್‌ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇರುವುದರಿಂದ ಪೊಲೀಸ್ ಇಲಾಖೆ ಸಂಕಷ್ಟದಲ್ಲಿದೆ. ಈ ನಡುವಲ್ಲೇ 545 ಸಬ್‌ಇನ್‌ಸ್ಪೆಕ್ಟರ್‌ಗಳ ಬ್ಯಾಚ್‌ನ ನೇಮಕಾತಿ ಹಗರಣದ ಕೇಳಿ ಬಂದಿದ್ದು, ತನಿಖೆ ನೇಮಕಾತಿ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

545 ಸಬ್‌ಇನ್‌ಸ್ಪೆಕ್ಟರ್‌ಗಳು ಅವರ ಹಿರಿಯರೇ ಆಗಿರುವುದರಿಂದ 400 ಎಸ್‌ಐಗಳ ನೇಮಕಾತಿಗೆ ಮುಂದಾಗಲು ಸಾಧ್ಯವಿಲ್ಲ. ಹಗರಣ-ಬಾಧಿತ ನೇಮಕಾತಿ ಪ್ರಕ್ರಿಯೆಯಲ್ಲಿ, ಆಯ್ಕೆಯಾದ ಸಬ್-ಇನ್‌ಸ್ಪೆಕ್ಟರ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ, ಹಗರಣದಲ್ಲಿ ಭಾಗಿಯಾಗಿರುವವರು ಕೇವಲ 40 ಅಭ್ಯರ್ಥಿಗಳು ಮತ್ತು ಇತರರೇಕೆ ಸಂಕಷ್ಟ ಅನುಭವಿಸಬೇಕೆಂದು ವಾದಿಸಿದ್ದಾರೆ.

ಈ ನಡುವೆ ಮರುಪರೀಕ್ಷೆ ನಡೆಸಲು ಅನುಮತಿ ಕೋರಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿದ್ದು, ಉತ್ತೀರ್ಣರಾದವರು ಇದನ್ನು ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿದ್ದೇ ಆದರೆ, ಮತ್ತೊಮ್ಮೆ ಎದುರಿಸುವ ವಿಶ್ವಾಸ ಹೊಂದಿರಬೇಕೆಂದು ನಾವು ಹೇಳುತ್ತಿದ್ದೇವೆ. ಈ ಅಭ್ಯರ್ಥಿಗಳ ಕುರಿತು ಏನು ಮಾಡಬೇಕೆಂಬುದನ್ನು ಚರ್ಚಿಸಲು ಸಭೆಗಳನ್ನು ನಡೆಸಿದ್ದೇವೆ. ಮರು ಪರೀಕ್ಷೆ ನಡೆಸಬೇಕು ಎಂದು ಕೆಲವು ಅಧಿಕಾರಿಗಳು ಸೂಚಿಸಿದ್ದರೂ, ಇಡೀ ಸಮಸ್ಯೆ ನ್ಯಾಯಾಲಯದ ಅಂಗಳದಲ್ಲಿದೆ ಎಂದರು.

ಬಿಟ್‌ಕಾಯಿನ್ ಹಗರಣದ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದ್ದರೂ, ರಾಜ್ಯ ಸರ್ಕಾರವು ಹೊಸದಾಗಿ ತನಿಖೆ ನಡೆಸಲಿದೆ. ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಹೊರಗಿದ್ದಾನೆ. ಪ್ರಕರಣದಲ್ಲಿ ಹಣ ಕೆಲವು ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಿದರು.

 

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago