BREAKING NEWS

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಈ ಕುರಿತು ಆಳವಾದ ತನಿಖೆ ನಡೆಸಲಿದೆ. ತಪ್ಪಿಸ್ಥರ ವಿರುದ್ಧ ಕ್ರಮವಾಗಲಿದೆ. ಪರೀಕ್ಷೆಯ ಭಾಗವನ್ನು ಕೂಡ ವಿಚಾರಣೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸುಮಾರು 1,000 ಸಬ್‌ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇರುವುದರಿಂದ ಪೊಲೀಸ್ ಇಲಾಖೆ ಸಂಕಷ್ಟದಲ್ಲಿದೆ. ಈ ನಡುವಲ್ಲೇ 545 ಸಬ್‌ಇನ್‌ಸ್ಪೆಕ್ಟರ್‌ಗಳ ಬ್ಯಾಚ್‌ನ ನೇಮಕಾತಿ ಹಗರಣದ ಕೇಳಿ ಬಂದಿದ್ದು, ತನಿಖೆ ನೇಮಕಾತಿ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

545 ಸಬ್‌ಇನ್‌ಸ್ಪೆಕ್ಟರ್‌ಗಳು ಅವರ ಹಿರಿಯರೇ ಆಗಿರುವುದರಿಂದ 400 ಎಸ್‌ಐಗಳ ನೇಮಕಾತಿಗೆ ಮುಂದಾಗಲು ಸಾಧ್ಯವಿಲ್ಲ. ಹಗರಣ-ಬಾಧಿತ ನೇಮಕಾತಿ ಪ್ರಕ್ರಿಯೆಯಲ್ಲಿ, ಆಯ್ಕೆಯಾದ ಸಬ್-ಇನ್‌ಸ್ಪೆಕ್ಟರ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ, ಹಗರಣದಲ್ಲಿ ಭಾಗಿಯಾಗಿರುವವರು ಕೇವಲ 40 ಅಭ್ಯರ್ಥಿಗಳು ಮತ್ತು ಇತರರೇಕೆ ಸಂಕಷ್ಟ ಅನುಭವಿಸಬೇಕೆಂದು ವಾದಿಸಿದ್ದಾರೆ.

ಈ ನಡುವೆ ಮರುಪರೀಕ್ಷೆ ನಡೆಸಲು ಅನುಮತಿ ಕೋರಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿದ್ದು, ಉತ್ತೀರ್ಣರಾದವರು ಇದನ್ನು ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿದ್ದೇ ಆದರೆ, ಮತ್ತೊಮ್ಮೆ ಎದುರಿಸುವ ವಿಶ್ವಾಸ ಹೊಂದಿರಬೇಕೆಂದು ನಾವು ಹೇಳುತ್ತಿದ್ದೇವೆ. ಈ ಅಭ್ಯರ್ಥಿಗಳ ಕುರಿತು ಏನು ಮಾಡಬೇಕೆಂಬುದನ್ನು ಚರ್ಚಿಸಲು ಸಭೆಗಳನ್ನು ನಡೆಸಿದ್ದೇವೆ. ಮರು ಪರೀಕ್ಷೆ ನಡೆಸಬೇಕು ಎಂದು ಕೆಲವು ಅಧಿಕಾರಿಗಳು ಸೂಚಿಸಿದ್ದರೂ, ಇಡೀ ಸಮಸ್ಯೆ ನ್ಯಾಯಾಲಯದ ಅಂಗಳದಲ್ಲಿದೆ ಎಂದರು.

ಬಿಟ್‌ಕಾಯಿನ್ ಹಗರಣದ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದ್ದರೂ, ರಾಜ್ಯ ಸರ್ಕಾರವು ಹೊಸದಾಗಿ ತನಿಖೆ ನಡೆಸಲಿದೆ. ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಹೊರಗಿದ್ದಾನೆ. ಪ್ರಕರಣದಲ್ಲಿ ಹಣ ಕೆಲವು ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂದು ಹೇಳಿದರು.

 

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago