ಬೆಂಗಳೂರು : ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿ ವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ.
2023ನೇ ಸಾಲಿನ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರವನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರಿಗೆ ನೀಡಲು ಭಾಷಾ ಸಮ್ಮಾನ್ ಪುರಸ್ಕಾರ ಸಮಿತಿ ನಿರ್ಧರಿಸಿದೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನ್ನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಲಂಕೇಶ್ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿದ್ದ ಪಂಜು ಗಂಗೊಳ್ಳಿ ಪತ್ರಕರ್ತರು ಮತ್ತು ಲೇಖಕರು. ಸದ್ಯಕ್ಕೆ ಅವರು ಮುಂಬಯಿಯಲ್ಲಿ ವಾಸವಾಗಿದ್ದಾರೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ, ಜಿ ವಿ. ಅರುಣ ಇದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ಜಿ.ವಿ. ಅವರ 111ನೇ ಹುಟ್ಟುಹಬ್ಬವಾದ ಆಗಸ್ಟ್ 23ರಂದು ಸಂಜೆ 6 ಗಂಟೆಗೆ ಪ್ರೊ. ಜಿವಿ ಜನ್ಮಶತಾಬ್ದಿ ಕಲಾ ಭವನ, ಜಯರಾಮ ಸೇವಾ ಮಂಡಳಿ, 492 / ಎ, ಒಂದನೇ ಮುಖ್ಯರಸ್ತೆ, ಎಂಟನೇ ಬ್ಲಾಕ್, ಜಯನಗರ, ಬೆಂಗಳೂರು ಇಲ್ಲಿ ನಡೆಯಲಿದೆ ಎಂದು ಕಥೆಕೂಟ ಮುಖ್ಯಸ್ಥ ಗೋಪಾಲಕೃಷ್ಣ ಕುಂಟಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…
ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…
ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…
ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ…
ಮೈಸೂರು: ಬಾಲಿವುಡ್ನಿಂದ ಸ್ಯಾಂಡಲ್ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್…