BREAKING NEWS

ಪಂಜು ಗಂಗೊಳ್ಳಿ ಅವರಿಗೆ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ

ಬೆಂಗಳೂರು : ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿ ವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ.

2023ನೇ ಸಾಲಿನ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರವನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರಿಗೆ ನೀಡಲು ಭಾಷಾ ಸಮ್ಮಾನ್ ಪುರಸ್ಕಾರ ಸಮಿತಿ ನಿರ್ಧರಿಸಿದೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನ್ನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಲಂಕೇಶ್ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿದ್ದ ಪಂಜು ಗಂಗೊಳ್ಳಿ ಪತ್ರಕರ್ತರು ಮತ್ತು ಲೇಖಕರು. ಸದ್ಯಕ್ಕೆ ಅವರು ಮುಂಬಯಿಯಲ್ಲಿ ವಾಸವಾಗಿದ್ದಾರೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ, ಜಿ ವಿ. ಅರುಣ ಇದ್ದರು.

ಪ್ರಶಸ್ತಿ ಪ್ರದಾನ ಸಮಾರಂಭ ಜಿ.ವಿ. ಅವರ 111ನೇ ಹುಟ್ಟುಹಬ್ಬವಾದ ಆಗಸ್ಟ್ 23ರಂದು ಸಂಜೆ 6 ಗಂಟೆಗೆ ಪ್ರೊ. ಜಿವಿ ಜನ್ಮಶತಾಬ್ದಿ ಕಲಾ ಭವನ, ಜಯರಾಮ ಸೇವಾ ಮಂಡಳಿ, 492 / ಎ, ಒಂದನೇ ಮುಖ್ಯರಸ್ತೆ, ಎಂಟನೇ ಬ್ಲಾಕ್, ಜಯನಗರ, ಬೆಂಗಳೂರು ಇಲ್ಲಿ ನಡೆಯಲಿದೆ ಎಂದು ಕಥೆಕೂಟ ಮುಖ್ಯಸ್ಥ ಗೋಪಾಲಕೃಷ್ಣ ಕುಂಟಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

3 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

23 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

45 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago