ಬೆಂಗಳೂರು : ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿ ವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ.
2023ನೇ ಸಾಲಿನ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರವನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರಿಗೆ ನೀಡಲು ಭಾಷಾ ಸಮ್ಮಾನ್ ಪುರಸ್ಕಾರ ಸಮಿತಿ ನಿರ್ಧರಿಸಿದೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನ್ನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಲಂಕೇಶ್ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿದ್ದ ಪಂಜು ಗಂಗೊಳ್ಳಿ ಪತ್ರಕರ್ತರು ಮತ್ತು ಲೇಖಕರು. ಸದ್ಯಕ್ಕೆ ಅವರು ಮುಂಬಯಿಯಲ್ಲಿ ವಾಸವಾಗಿದ್ದಾರೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ, ಜಿ ವಿ. ಅರುಣ ಇದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ಜಿ.ವಿ. ಅವರ 111ನೇ ಹುಟ್ಟುಹಬ್ಬವಾದ ಆಗಸ್ಟ್ 23ರಂದು ಸಂಜೆ 6 ಗಂಟೆಗೆ ಪ್ರೊ. ಜಿವಿ ಜನ್ಮಶತಾಬ್ದಿ ಕಲಾ ಭವನ, ಜಯರಾಮ ಸೇವಾ ಮಂಡಳಿ, 492 / ಎ, ಒಂದನೇ ಮುಖ್ಯರಸ್ತೆ, ಎಂಟನೇ ಬ್ಲಾಕ್, ಜಯನಗರ, ಬೆಂಗಳೂರು ಇಲ್ಲಿ ನಡೆಯಲಿದೆ ಎಂದು ಕಥೆಕೂಟ ಮುಖ್ಯಸ್ಥ ಗೋಪಾಲಕೃಷ್ಣ ಕುಂಟಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…