BREAKING NEWS

ಜಮ್ಮು–ಕಾಶ್ಮೀರದಲ್ಲಿ ಜಿ 20 ಸಭೆ: ಪಾಕ್‌ ತೀವ್ರ ವಿರೋಧ

ಇಸ್ಲಾಮಾಬಾದ್‌ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.

‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್‌ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ‍ಪಾಕ್‌ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.

‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.

andolanait

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

31 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

10 hours ago