Mysore
25
overcast clouds
Light
Dark

ಜಿ20 ಶೃಂಗಸಭೆ : ಅಲಂಕಾರಕ್ಕೆ ಶಿವಲಿಂಗ ಆಕಾರದ ಕಾರಂಜಿ ಬಳಕೆ – ಎಎಪಿ ವಿರೋಧ

ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ ಪಾರ್ಟಿ ತಕರಾರು ತೆಗೆದಿದೆ.

ಶಿವಲಿಂಗವನ್ನು ಅಲಂಕಾರದ ವಸ್ತುವಾಗಿ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಆಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ವಿರುದ್ಧ ದೂರು ನೀಡಿದೆ. ಇದು ಶಿವಲಿಂಗಕ್ಕೆ ಮಾಡಿದ ಅವಮಾನ, ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದೆ.

ಆದರೆ ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಪ್ರತಿಯೊಂದು ವಿಚಾರವನ್ನು ರಾಜಕೀಯ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ