BREAKING NEWS

ಜಿ20 ಶೃಂಗಸಭೆ : ಅಲಂಕಾರಕ್ಕೆ ಶಿವಲಿಂಗ ಆಕಾರದ ಕಾರಂಜಿ ಬಳಕೆ – ಎಎಪಿ ವಿರೋಧ

ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ ಪಾರ್ಟಿ ತಕರಾರು ತೆಗೆದಿದೆ.

ಶಿವಲಿಂಗವನ್ನು ಅಲಂಕಾರದ ವಸ್ತುವಾಗಿ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಆಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ವಿರುದ್ಧ ದೂರು ನೀಡಿದೆ. ಇದು ಶಿವಲಿಂಗಕ್ಕೆ ಮಾಡಿದ ಅವಮಾನ, ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದೆ.

ಆದರೆ ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಪ್ರತಿಯೊಂದು ವಿಚಾರವನ್ನು ರಾಜಕೀಯ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿದೆ.

lokesh

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

38 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

42 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

49 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

55 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago