Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಗಾಂಧಿ ಜಯಂತಿ: ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇರಿಸಿದ್ದ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ʼʼಇಂದು ಮಹಾತ್ಮ ಗಾಂಧಿಯವರ ಜನ್ಮದಿನ ಹಾಗೂ ಲಾಲು ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಕೂಡ ಇದೆ. ಇಡೀ ದೇಶಾದ್ಯಂತ ಗಾಂಧಿಜಿಯವರ ಜನ್ಮ ದಿನ ಆಚರಣೆ ಮಾಡಲಾಗುತ್ತಿದೆ. ನಾವೆಲ್ಲಾ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ. ಅವರ ಹೋರಾಟ ಬದುಕು ನಮಗೆ ಸ್ಪೂರ್ತಿಯಾಗಲಿ, ಲಾಲ್ ಬಹಾದ್ದೂರ್ ಶಾಸ್ತ್ರಿ ದೇಶಕಂಡ ಪ್ರಾಮಾಣಿಕ ಪ್ರಧಾನಿಯಾಗಿದ್ದರುʼʼ ಎಂದು ಪ್ರತಿಕ್ರಿಯಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!