ಲಖನೌ : ಲಖನೌ ನ ಕೈಸರ್ಬಾಗ್ನಲ್ಲಿರುವ ಪಾಸ್ಕೋ ಕೋರ್ಟ್ನ ಗೇಟ್ನಲ್ಲಿ ವಕೀಲರ ಉಡುಪಿನಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ ಸಹ ಗುಂಡು ತಗುಲಿದೆ.
ಸಂಜೀವ್ ಜೀವಾ, ಕೃಷ್ಣಾನಂದ ರೈ ಹತ್ಯೆ ಪ್ರಕರಣದ ಆರೋಪಿಯಾಗಿದ್ದು, ಮುನ್ನಾ ಬಜರಂಗಿ ಮತ್ತು ಮುಖ್ತಾರ್ ಅನ್ಸಾರಿಗೆ ಆಪ್ತನಾಗಿದ್ದ ಎನ್ನಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಹಗಲು ಹೊತ್ತಿನಲ್ಲಿ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಲಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಕ್ನೋ ಕೋರ್ಟ್ ಕ್ಯಾಂಪಸ್ ಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಈ ದಾಳಿಯಿಂದಾಗಿ ಮತ್ತೆ ಸಂಚಲನ ಮೂಡಿದೆ. ಪ್ರಯಾಗರಾಜ್ ಹತ್ಯಾಕಾಂಡದ ಸುಮಾರು ನಾಲ್ಕು ತಿಂಗಳ ನಂತರ, ಈ ಹತ್ಯಾಕಾಂಡವು ಸಂಚಲನವನ್ನು ಸೃಷ್ಟಿಸಿದೆ.
ವಕೀಲರ ಸೋಗಿನಲ್ಲಿ ಬಂದ ಕ್ರಿಮಿನಲ್ ಗಳು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಯನ್ನು ಹಿಡಿದು ಪೊಲೀಸರು ಕೇಸರಬಾಗ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸಂಜೀವ್ ಜೀವಾ ಮುಜಾಫರ್ನಗರ ನಿವಾಸಿಯಾಗಿದ್ದು ಮುಖ್ತಾರ್ ಅನ್ಸಾರಿ, ಮುನ್ನಾ ಬಜರಂಗಿ ಮತ್ತು ಭಾಟಿ ಗ್ಯಾಂಗ್ಗಾಗಿ ಕೆಲಸ ಮಾಡುತ್ತಿದ್ದನು. ಈತನ ವಿರುದ್ಧ ಸುಮಾರು ಮೂರು ಡಜನ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
ಸಂಜೀವ್ ಜೀವಾ ಅವರ ಪತ್ನಿ ಪಾಯಲ್ ಮಹೇಶ್ವರಿ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಜೀವ ಬೆದರಿಕೆಯನ್ನು ತಿಳಿಸಿ ಭದ್ರತೆಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಅವರ ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಆದರೆ ನ್ಯಾಯಾಲಯದ ಒಳಗೆ ದಾಳಿ ನಡೆಸಿರುವುದು ಆತಂಕವನ್ನುಂಟು ಮಾಡಿದೆ.
ಲಖನೌ ಕೋರ್ಟ್ ಕ್ಯಾಂಪಸ್ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರಲ್ಲಿ ಒಬ್ಬರ ಹೆಸರು ಲಾಲ್ ಮೊಹಮ್ಮದ್ ಎಂದು ಹೇಳಲಾಗಿದೆ. ಕೃಷ್ಣಾನಂದ ರೈ ಹತ್ಯೆ ಪ್ರಕರಣದಲ್ಲಿ ಸಂಜೀವ್ ಭಾಟಿ ಎಷ್ಟರ ಮಟ್ಟಿಗೆ ಶಾಮೀಲಾಗಿದ್ದನೆಂದರೆ ಅಂದಿನ ಶಾಸಕರ ಕಾರನ್ನು ಹತ್ತಿಸಿ ಎಕೆ 47 ನಿಂದ 27 ಗುಂಡುಗಳನ್ನು ಹಾರಿಸಿದ್ದರು ಎನ್ನಲಾಗಿದೆ. ಇದರಲ್ಲಿ ಕೃಷ್ಣಾನಂದ ರೈ ಸೇರಿದಂತೆ ಹಲವರು ಸಾವಿಗೀಡಾಗಿದ್ದರು. ಕೃಷ್ಣಾನಂದ ರೈ ಹತ್ಯೆ ಪ್ರಕರಣದಲ್ಲಿ ಮುಕ್ತಾರ್ ಅನ್ಸಾರಿ ಸೇರಿದಂತೆ ಹಲವರು ಶಿಕ್ಷೆಗೆ ಗುರಿಯಾಗಿದ್ದಾರೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…