ಬೆಂಗಳೂರು : ಜೆಡಿಎಸ್ನಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದ್ದು, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ತನ್ನನ್ನು ಪರಿಗಣಿಸದೆ ದೆಹಲಿಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಅಲ್ಲದೆ, ಮೈತ್ರಿ ಮಾಡಿಕೊಳ್ಳದಂತೆ ಒತ್ತಡ ಹೇರುತ್ತಲೇ ಇದ್ದರು.
ಅದಾಗ್ಯೂ, ಜೆಡಿಎಸ್ ಪಕ್ಷದಿಂದ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಅವರು ಇತ್ತೀಚೆಗೆ ಆದೇಶಿಸಿದ್ದರು. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದರು.
ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.
ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದರು.
ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…