BREAKING NEWS

ಚಿರತೆಗೆ ಬಾಲಕಿ ಬಲಿ : ತಿರುಮಲ ಬೆಟ್ಟ ಹತ್ತಲು ಹೊಸ ರೂಲ್ಸ್‌

ತಿರುಪತಿ : ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ.

ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2ರವರೆಗೆ ಮಾತ್ರ 15ವರ್ಷದ ಮಕ್ಕಳ ಜೊತೆ ಪೋಷಕರು ಬೆಟ್ಟ ಹತ್ತಬಹುದಾಗಿದೆ. ಅಲಿಪಿರಿ ಮಾರ್ಗಮಧ್ಯೆ ಏಳನೇ ಮೈಲಿ ಬಳಿ ಮಕ್ಕಳಿಗೆ ಟ್ಯಾಗ್ ಹಾಕಲಾಗುತ್ತದೆ. ಅದರಲ್ಲಿ ಮಕ್ಕಳ ಹೆಸರು, ಪೋಷಕರ ವಿವರ, ಫೋನ್ ನಂಬರ್, ಪೊಲೀಸ್ ಟೋಲ್ ಫ್ರೀ ನಂಬರ್ ಇರಲಿದೆ.

ಹಿರಿಯರು ರಾತ್ರಿ 10 ಗಂಟೆಯವರೆಗೆ ಹೋಗಬಹುದು. ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯವರೆಗೆ ಮಾತ್ರ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡಲಾಗುತ್ತದೆ. ಯಾತ್ರಾರ್ಥಿಗಳನ್ನು ಗುಂಪುಗಳಲ್ಲಿ ಕಳುಹಿಸಲು ನಿರ್ಧರಿಸಲಾಗಿದೆ.

ಚಿರತೆ ಮಗುವನ್ನು ಕೊಂದು ಹಾಕಿರುವ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳು, ಪೊಲೀಸ್‌ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ, ತಿರುಪತಿ ಮತ್ತು ತಿರುಮಲ ನಡುವೆ 500 ಕ್ಯಾಮೆರಾ ಸ್ಥಾಪಿಸಲಾಗುವುದು ಮತ್ತು ಅಗತ್ಯವಿದ್ದರೆ ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗುವುದು ಎಂದು ತಿಳಿಸಿದರು.

ನರಭಕ್ಷಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದರೂ ತಿರುಮಲದಲ್ಲಿ ಇನ್ನೂ ಐದು ಚಿರತೆಗಳು ಇವೆ ಎನ್ನಲಾಗಿದೆ. ಈ ಆತಂಕದ ಮಧ್ಯೆ 2000 ಮೆಟ್ಟಿಲ ಬಳಿ ಕರಡಿ ಕೂಡ ಕಾಣಿಸಿಕೊಂಡಿದೆ.

lokesh

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

38 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

42 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

49 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

55 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago