ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.
ಕಳೆದ ಜೂನ್ನಿಂದ ಸೆಪ್ಟೆಂಬರ್ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.
ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.
ಸೆ.21ರ ಸಭೆಯಲ್ಲಿ ಸಿಡಬ್ಲ್ಯೂಆರ್ಸಿ ಪ್ರತಿನಿತ್ಯ ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿತ್ತು.
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…