ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.
ಕಳೆದ ಜೂನ್ನಿಂದ ಸೆಪ್ಟೆಂಬರ್ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.
ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.
ಸೆ.21ರ ಸಭೆಯಲ್ಲಿ ಸಿಡಬ್ಲ್ಯೂಆರ್ಸಿ ಪ್ರತಿನಿತ್ಯ ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿತ್ತು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…