BREAKING NEWS

ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಹರಿಸಿ : ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಆದೇಶ

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.

ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.

ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.

ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್‌ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.

ಸೆ.21ರ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಪ್ರತಿನಿತ್ಯ ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿತ್ತು.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

16 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago