BREAKING NEWS

ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಹರಿಸಿ : ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಆದೇಶ

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.

ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.

ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.

ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್‌ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.

ಸೆ.21ರ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಪ್ರತಿನಿತ್ಯ ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿತ್ತು.

lokesh

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

28 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago