BREAKING NEWS

ಕಬ್ಬು ಬೆಳೆಗಾರರಿಗೆ 30 ಸಾವಿರ ಪರಿಹಾರ ನೀಡಿ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ ಇದ್ದಾರೆ. ಕಬ್ಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30,000 ಪರಿಹಾರ ಕೊಡಿ. ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಿ.ಕೇಂದ್ರ ಸರ್ಕಾರ ಕೊಡಬೇಕಾದ ಬರ ಪರಿಹಾರ ಕೊಟ್ಟೆ ಕೊಡುತ್ತದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿವೈ ವಿಜೇಂದ್ರ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ಪರಿಹಾರ ಕ್ರಮ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ಬಳಿ ಹಣ ಇಲ್ಲ. ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು.

ಆದ್ದರಿಂದ ರಾಜ್ಯ ಸರ್ಕಾರ ಅದನ್ನೇ ನೆಪ ಮಾಡಿಕೊಂಡು ಇರುವುದು ಬೇಡ ಎಂದರು.ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಬರ ಪರಿಹಾರ ಕೊಡಬೇಕು ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಆಗ್ರಹಿಸಿದರು.

ಸರ್ಕಾರ ಕಣ್ಣಿದ್ದು ಕುರುಡಾಗಿದೆ ಕಿವಿ ಇದ್ದು ಕಿವುಡಾಗಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ನಿಮ್ಮ ತಂದೆಯವರು ಭಾಷಣದಲ್ಲಿ ಈ ಮಾತು ಹೇಳುತ್ತಿದ್ದರು.ನಿಮ್ಮ ತಂದೆಯವರ ಮಾತನ್ನು ನೀವು ಮುಂದುವರಿಸುತ್ತಿದ್ದೀರಿ.ಅವರು ಹೃದಯವು ಇಲ್ಲ ಎನ್ನುತ್ತಿದ್ದರು ಅದನ್ನು ಹೇಳಲಿಲ್ಲವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರರ ಕಾಲೆಳೆದರು.

andolanait

Recent Posts

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

21 mins ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

26 mins ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

1 hour ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 hours ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

2 hours ago