ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ ಇದ್ದಾರೆ. ಕಬ್ಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30,000 ಪರಿಹಾರ ಕೊಡಿ. ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಿ.ಕೇಂದ್ರ ಸರ್ಕಾರ ಕೊಡಬೇಕಾದ ಬರ ಪರಿಹಾರ ಕೊಟ್ಟೆ ಕೊಡುತ್ತದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿವೈ ವಿಜೇಂದ್ರ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ಪರಿಹಾರ ಕ್ರಮ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ಬಳಿ ಹಣ ಇಲ್ಲ. ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು.
ಆದ್ದರಿಂದ ರಾಜ್ಯ ಸರ್ಕಾರ ಅದನ್ನೇ ನೆಪ ಮಾಡಿಕೊಂಡು ಇರುವುದು ಬೇಡ ಎಂದರು.ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಬರ ಪರಿಹಾರ ಕೊಡಬೇಕು ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಸರ್ಕಾರ ಕಣ್ಣಿದ್ದು ಕುರುಡಾಗಿದೆ ಕಿವಿ ಇದ್ದು ಕಿವುಡಾಗಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ನಿಮ್ಮ ತಂದೆಯವರು ಭಾಷಣದಲ್ಲಿ ಈ ಮಾತು ಹೇಳುತ್ತಿದ್ದರು.ನಿಮ್ಮ ತಂದೆಯವರ ಮಾತನ್ನು ನೀವು ಮುಂದುವರಿಸುತ್ತಿದ್ದೀರಿ.ಅವರು ಹೃದಯವು ಇಲ್ಲ ಎನ್ನುತ್ತಿದ್ದರು ಅದನ್ನು ಹೇಳಲಿಲ್ಲವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರರ ಕಾಲೆಳೆದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…