ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ ಇದ್ದಾರೆ. ಕಬ್ಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30,000 ಪರಿಹಾರ ಕೊಡಿ. ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಿ.ಕೇಂದ್ರ ಸರ್ಕಾರ ಕೊಡಬೇಕಾದ ಬರ ಪರಿಹಾರ ಕೊಟ್ಟೆ ಕೊಡುತ್ತದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿವೈ ವಿಜೇಂದ್ರ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ಪರಿಹಾರ ಕ್ರಮ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ಬಳಿ ಹಣ ಇಲ್ಲ. ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು.
ಆದ್ದರಿಂದ ರಾಜ್ಯ ಸರ್ಕಾರ ಅದನ್ನೇ ನೆಪ ಮಾಡಿಕೊಂಡು ಇರುವುದು ಬೇಡ ಎಂದರು.ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಬರ ಪರಿಹಾರ ಕೊಡಬೇಕು ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಸರ್ಕಾರ ಕಣ್ಣಿದ್ದು ಕುರುಡಾಗಿದೆ ಕಿವಿ ಇದ್ದು ಕಿವುಡಾಗಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ನಿಮ್ಮ ತಂದೆಯವರು ಭಾಷಣದಲ್ಲಿ ಈ ಮಾತು ಹೇಳುತ್ತಿದ್ದರು.ನಿಮ್ಮ ತಂದೆಯವರ ಮಾತನ್ನು ನೀವು ಮುಂದುವರಿಸುತ್ತಿದ್ದೀರಿ.ಅವರು ಹೃದಯವು ಇಲ್ಲ ಎನ್ನುತ್ತಿದ್ದರು ಅದನ್ನು ಹೇಳಲಿಲ್ಲವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರರ ಕಾಲೆಳೆದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…