ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮ್ಮ ಮೇಲಿನ ಕೋಪಕ್ಕೆ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಬಿಜೆಪಿ ಎಂದರೆ ಬಡವರ ವಿರೋದಿ ಪಕ್ಷ. ಹೀಗಾಗಿ, ನಾವು ಬೇರೆ ಕಡೆಯಿಂದ ಅಕ್ಕಿ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಬುಧವಾರ (ಜೂನ್ 28) ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.
ಅಕ್ಕಿ ತರಲು ಪ್ರಯತ್ನ ಮಾಡಿದರು ಅಗತ್ಯ ಪ್ರಮಾಣದ ದಾಸ್ತಾನು ಸಿಕ್ಕಿಲ್ಲ. ಅಕ್ಕಿ ಸಿಕ್ಕಿದ ಕೂಡಲೆ ನಾವು ಈ ಯೋಜನೆ ಜಾರಿ ಮಾಡ್ತೇವೆ. ಯಾವುದೇ ಕಾರಣಕ್ಕೂ ಯೋಜನೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅನ್ನಭಾಗ್ಯ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ” ಯಡಿಯೂರಪ್ಪ ಮಾತನಾಡಲಿ. ಅವರ ಅವಧಿಯಲ್ಲಿ ಏನು ಜನಪರ ಯೋಜನೆ ಮಾಡಿದ್ರು ಹೇಳಲಿ. ಯಡಿಯೂರಪ್ಪ ಹೋರಾಟ ಮಾಡೋದು ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ ಎಂದು ತಿರುಗೇಟು ನೀಡಿದರು.
ನಮ್ಮ ಸರ್ಕಾರ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ. 1.28 ಕೋಟಿ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…