BREAKING NEWS

ರಾಜ್ಯದಿಂದ ಹಣ ಕೊಡ್ತಿವಿ, ಯಡಿಯೂರಪ್ಪ ಹೋರಾಟ ಬಿಟ್ಟು ಅಕ್ಕಿ ಕೊಡಿಸಲಿ: ಸಿದ್ದರಾಮಯ್ಯ

ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮ್ಮ ಮೇಲಿನ ಕೋಪಕ್ಕೆ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಬಿಜೆಪಿ ಎಂದರೆ ಬಡವರ ವಿರೋದಿ ಪಕ್ಷ. ಹೀಗಾಗಿ, ನಾವು ಬೇರೆ ಕಡೆಯಿಂದ ಅಕ್ಕಿ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಬುಧವಾರ (ಜೂನ್‌ 28) ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಅಕ್ಕಿ ತರಲು ಪ್ರಯತ್ನ ಮಾಡಿದರು ಅಗತ್ಯ ಪ್ರಮಾಣದ ದಾಸ್ತಾನು ಸಿಕ್ಕಿಲ್ಲ. ಅಕ್ಕಿ ಸಿಕ್ಕಿದ ಕೂಡಲೆ ನಾವು ಈ ಯೋಜನೆ ಜಾರಿ ಮಾಡ್ತೇವೆ. ಯಾವುದೇ ಕಾರಣಕ್ಕೂ ಯೋಜನೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಹೋರಾಟ ಬಿಟ್ಟು ಅಕ್ಕಿ ಕೊಡಿಸಲಿ

ಯಡಿಯೂರಪ್ಪ ಅನ್ನಭಾಗ್ಯ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ” ಯಡಿಯೂರಪ್ಪ ಮಾತನಾಡಲಿ. ಅವರ ಅವಧಿಯಲ್ಲಿ ಏನು ಜನಪರ ಯೋಜನೆ ಮಾಡಿದ್ರು ಹೇಳಲಿ. ಯಡಿಯೂರಪ್ಪ ಹೋರಾಟ ಮಾಡೋದು ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ ಎಂದು ತಿರುಗೇಟು ನೀಡಿದರು.

ಜುಲೈ 1 ರಿಂದ ಗೃಹಜ್ಯೋತಿ

ನಮ್ಮ ಸರ್ಕಾರ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ. 1.28 ಕೋಟಿ‌ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago