BREAKING NEWS

ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ : ದರ್ಶನ್ ಧ್ರುವನಾರಾಯಣ

ನಂಜನಗೂಡು : ನಾನು ತಂದೆ ತಾಯಿ ಇಬ್ಬರನ್ನ ಕಳೆದುಕೊಂಡಿದ್ದೇನೆ. ನಿಮ್ಮನ್ನ ನಂಬಿ ಚುನಾವಣೆ ಎದುರಿಸುತ್ತಿದ್ದೇನೆ. ಕ್ಷೇತ್ರದ ಜನತೆಯೇ ನನ್ನ ತಂದೆ ತಾಯಿ ಈಗ. ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ ಎಂದು ನಂಜನಗೂಡು ಕಾಂಗ್ರೆಸ್​​ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಇಡೀ ಕುಟುಂಬ ಈಗಲೂ ಕೂಡ ನೋವು, ದುಃಖದ ವಾತವರಣದಲ್ಲಿದೆ. ನಿಮ್ಮೆಲ್ಲರ ಶಕ್ತಿಯಿಂದ ಚುನಾವಣೆಗೆ ನಿಂತಿದ್ದೇನೆ ಎಂದು ಸಭೆಯಲ್ಲಿ ಕ್ಷೇತ್ರದ ಜನತೆ ಮುಂದೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.

ನಮ್ಮ ತಂದೆ ನಿಮ್ಮಲ್ಲರಿಗೂ ನಿರಂತರ ಸ್ಪಂದಿಸುವುದರ ಜೊತೆಗೆ ನಿಮ್ಮ ಜೊತೆ ಇದ್ದರು. ಲೋಕಸಭೆ ಸೋಲಿನ ಬಳಿಕ ಈ ಕ್ಷೇತ್ರದ ಜನರಿಗೆ ಸೇವೆ ಮಾಡೋ ಆಸೆ ಇಟ್ಟುಕೊಂಡಿದ್ದರು. ಆದರೆ ವಿಧಿವಶರಾದ್ರು, ಕೆಲ ದಿನಗಳಲ್ಲೇ ನಮ್ಮ ತಾಯಿಯನ್ನ ಕಳೆದುಕೊಂಡೆ. ಇದರ ನಡುವೆ ಕಾಂಗ್ರೆಸ್​​​ ನಿಮ್ಮ ಸೇವೆಗೆ ಒಂದು ಅವಕಾಶ ನೀಡಿದೆ. ದಯಮಾಡಿ ನೀವೆಲ್ಲ ನನಗೆ ಆಶೀರ್ವಾದಿಸಿ ಎಂದು ಮತಯಾಚನೆ ಮಾಡಿದ್ದಾರೆ.

ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ. ಪ್ರಚಾರದ ವೇಳೆ ನೀವೆಲ್ಲ ಸಮಸ್ಯೆಗಳನ್ನ ಹೇಳಿಕೊಂಡಿದ್ದೀರಿ. ನಂಜನಗೂಡಿನ ಜನ ಭ್ರಷ್ಟಾಚಾರದ ವಿರುದ್ಧ ಬದಲಾವಣೆಗೆ ಸಿದ್ದ ಇದ್ದೀರಿ. ನಾನು ತಂದೆ ತಾಯಿ ಇಬ್ಬರನ್ನ ಕಳೆದುಕೊಂಡಿದ್ದೇನೆ. ನಿಮ್ಮನ್ನ ನಂಬಿ ಚುನಾವಣೆ ಎದುರಿಸುತ್ತಿದ್ದೇನೆ. ಕ್ಷೇತ್ರದ ಜನತೆಯೇ ನನ್ನ ತಂದೆ, ತಾಯಿ ಆಗಿದ್ದೀರಾ ಎಂದು ಹೇಳಿದ್ದಾರೆ.

ನಮ್ಮ ತಂದೆಯ ಹಾದಿಯಲ್ಲೇ ನಡೆದು ಸೇವೆ ಮಾಡಲು ಸಿದ್ದನಿದ್ದೇನೆ. ಕ್ಷೇತ್ರದ ಜನತೆಯೇ ನಮ್ಮ ತಂದೆಯವರು ಬಿಟ್ಟು ಹೋಗಿರುವ ಆಸ್ತಿ. ನಮ್ಮ ಕುಟುಂಬ ಬಹಳ ಕಷ್ಟದಲ್ಲಿದೆ. ಚುನಾವಣೆಯನ್ನು ಹಣದಲ್ಲಿ ಮಾಡಲು ಆಗುವುದಿಲ್ಲ. ದಯಾಮಾಡಿ ನನಗೆ ಒಂದು ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

lokesh

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

1 hour ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

3 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

4 hours ago