BREAKING NEWS

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ : ಅಮಿತ್ ಷಾ

ಬೀದರ್ – ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ.
ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯ ಗೋರಟಾ ಗ್ರಾಮ ಮತ್ತು ರಾಯಚೂರು ಜಿಲ್ಲೆಯ ಗಬ್ಬೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದೆ ಎಂದು ಟೀಕಿಸಿದರು.

‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ.ಇದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ , ಈ ಮೀಸಲಾತಿಯನ್ನು ತೆಗೆದು ಸಂವಿಧಾನದ ಆಶಯ ಅನುಷ್ಟಾನ ಮಾಡುತ್ತಿದೆ.
ಎಂದು ತಿಳಿಸಿದರು.

ಮೀಸಲಾತಿಯಲ್ಲಿ ಬಿಜೆಪಿ ಸರ್ಕಾರ ಬದಲಾವಣೆ ಮಾಡಿದೆ. ಓಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಸರ್ಕಾರ ಶೇ.4 ಮುಸ್ಲಿಂ ಮೀಸಲಾತಿ ನೀಡಿತ್ತು. ಇದರಲ್ಲಿ ಶೇ. 2 ಹಾಗೂ ವೀರಶೈವ ಲಿಂಗಾಯತರಿಗೆ ಶೇ.2 ಮೀಸಲಾತಿ ನೀಡಿದ್ದೇವೆ. ಎಸ್‌ಸಿಎಸ್‌ಟಿ ಮೀಸಲಾತಿಯಲ್ಲೂ ಬದಲಾವಣೆ ಮಾಡಿ ಅನ್ಯಾಯ ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೂ ಹೊಸ ಒಳಮೀಸಲಾತಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿಗೆ ಆಗಿರುವ ಅನ್ಯಾಯವನ್ನು ದೂರ ಮಾಡಲು ಪ್ರಯತ್ನಿಸಿದೆ.
ಸಂಪೂರ್ಣ 2B ಪ್ರವರ್ಗವು ಮುಸ್ಲಿಮರಿಗೆ ಮಾತ್ರ ಇತ್ತು. ಸಂವಿಧಾನಾತ್ಮಕವಾಗಿ ಸಮರ್ಥನೀಯವಲ್ಲ ಎಂದು ಬಿಜೆಪಿ ಸರ್ಕಾರವು ಅದನ್ನು ರದ್ದುಗೊಳಿಸಿತು ಎಂದರು.

ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರಿಗೆ 2C ಮತ್ತು ವೀರಶೈವ ಲಿಂಗಾಯಿತರಿಗೆ 2Dಯಲ್ಲಿ ಸಮಾನವಾಗಿ ಶೇ 4ರಷ್ಟು ಮೀಸಲಾತಿಯನ್ನು ಹಂಚಿತು.ಇದರೊಂದಿಗೆ, 2B ಅನಗತ್ಯವಾಯಿತು. ಆದರೆ, ಒಕ್ಕಲಿಗರ ಮೀಸಲಾತಿ ಶೇ 4 ರಿಂದ 6ಕ್ಕೆ ಮತ್ತು ಲಿಂಗಾಯಿತರ ಮೀಸಲಾತಿ ಐದು ಪ್ರತಿಶತದಿಂದ ಏಳು ಪ್ರತಿಶತಕ್ಕೆ ಏರಿತು. ಬಿಜೆಪಿಗೆ ಎಂದಿಗೂ ತುಷ್ಟೀಕರಣದಲ್ಲಿ ನಂಬಿಕೆ ಇಲ್ಲ. ಹಾಗಾಗಿ, ಮೀಸಲಾತಿಯನ್ನು ಬದಲಾಯಿಸಲು ನಿರ್ಧರಿಸಿದೆ ಎಂದು ಶಾ ಈ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡರು.

ಕಾಂಗ್ರೆಸ್‌ನ ತುಷ್ಟೀಕರಣ ರಾಜನೀತಿಯ ಕಾರಣಕ್ಕೆ ಅವರು ಎಂದಿಗೂ ಹೈದರಾಬಾದ್‌ ಮುಕ್ತಿಗೆ ಹೋರಾಡಿದವರನ್ನು ನೆನೆಸಿಕೊಂಡಿಲ್ಲ. ಸರ್ದಾರ್‌ ಪಟೇಲ್‌ ಇಲ್ಲದಿದ್ದರೆ ಹೈದರಾಬಾದ್‌ ಸ್ವಾತಂತ್ರ್ಯವಾಗುತ್ತಿರಲಿಲ್ಲ ಎಂದು ಅಮಿತ್ ಷಾ ಕಿಡಿಕಾರಿದರು.

ಕ್ರೂರ ನಿಜಾಮ ಆಳ್ವಿಕೆಯಿಂದ ಹೈದರಾಬಾದ್‌ನ ವಿಮೋಚನೆಗಾಗಿ ಹೋರಾಡಿದ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳುವುದಿಲ್ಲ .ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸಲು ಹಿಂದೇಟು ಹಾಕುತ್ತಿರುವ ಕೆ. ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

1948ರ ಮೇ 9ರಂದು ಗೋರಟಾದ ಭೀಕರತೆಯನ್ನು ನೆನಪಿಸಿಕೊಂಡ ಕೇಂದ್ರ ಸಚಿವರು, ದೇಶವು ಸ್ವತಂತ್ರ ಪಡೆದಾಗಲೂ ಗೋರಟಾದಲ್ಲಿ ಕ್ರೂರ ನಿಜಾಮರಿಂದ 200ಕ್ಕೂ ಹೆಚ್ಚು ಜನರನ್ನು ಕಗ್ಗೊಲೆ ಮಾಡಲಾಯಿತು. ಆದರೆ, ಅದರ ತುಷ್ಟೀಕರಣ ನೀತಿಯಿಂದಾಗಿ, ತನ್ನ ಮತ ಬ್ಯಾಂಕ್‌ಗಾಗಿ ದುರಾಸೆಗಾಗಿ ಹೈದರಾಬಾದ್ ವಿಮೋಚನೆಗಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳಲಿಲ್ಲ ಎಂದು ಹೇಳಿದರು.

ಕಳೆದ ವರ್ಷ ತೆಲಂಗಾಣದಲ್ಲಿ ಬಿಜೆಪಿ ಇದನ್ನು ಆಚರಿಸಿತ್ತು ಮತ್ತು ಈ ವರ್ಷವೂ ತಾವು ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಾಗಿ ತಿಳಿಸಿದರು.ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮತ್ತು ಗೋರಟಾದ ಜನರ ಕಥೆಯನ್ನು ಹೇಳಲು ಕರ್ನಾಟಕದಲ್ಲಿ 50 ಕೋಟಿ ವೆಚ್ಚದಲ್ಲಿ ಗೋರಟಾದಲ್ಲಿ ಭವ್ಯ ಹುತಾತ್ಮರ ಸ್ಮಾರಕ ನಿರ್ಮಿಸಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಜನರಿಗೆ ಮನವಿ ಮಾಡಿದರು.
ಕಳೆದ ಚುನಾವಣೆಯಲ್ಲಿ 104 ಸ್ಥಾನ ನೀಡಿದಿರಿ. ತಕ್ಷಣವೇ ಜೆಡಿಎಸ್‌ನವರು ಕಾಂಗ್ರೆಸ್‌ ಮಡಿಲಲ್ಲಿ ಕುಳಿತರು. ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಬಿಜೆಪಿಯ ಯಡಿಯೂರಪ್ಪ, ಆದರೆ ಸಿಎಂ ಆಗಿದ್ದು ಕುಮಾರಸ್ವಾಮಿ. ಇಂಥವರು ಕರ್ನಾಟಕಕ್ಕೆ ಒಳ್ಳೆಯದು ಮಾಡುವುದಿಲ್ಲ. ಕೇವಲ ಮೋದಿ ನೇತೃತ್ವ ಮಾತ್ರ ಕರ್ನಾಟಕಕ್ಕೆ ಒಳಿತು ಮಾಡಲು ಸಾಧ್ಯ. ಈ ಭಾಗವನ್ನು ಹೈದರಾಬಾದ್‌ ಕರ್ನಾಟಕ ಎಂದು ಕರೆಯಲಾಗುತ್ತಿತ್ತು. ಈ ಗುಲಾಮಿತನದ ಗುರುತಿನ ಹೆಸರನ್ನು ಯಡಿಯೂರಪ್ಪ ಬದಲಾಯಿಸಿ ಈ ಪ್ರದೇಶದ ವಿಕಾಸಕ್ಕೆ 300 ಕೋಟಿ ರೂ. ನೀಡಿದರು. ಇದೀಗ ಬಸವರಾಜ ಬೊಮ್ಮಾಯಿ ಸರ್ಕಾರ 5 ಸಾವಿರ ಕೋಟಿ ರೂ. ನೀಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಕೊರೊನಾ ವೇಳೆ ಲಸಿಕೆ ನೀಡಲು ಒಂದೇ ಒಂದು ಪೈಸೆ ಪಡೆದಿಲ್ಲ. ಬಡವರ ಮನೆಗೆ ಉಚಿತವಾಗಿ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಸರ್ಕಾರ ಲಿಂಗಾಯತರ ಮೀಸಲಾತಿ ಹೆಚ್ಚಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ಕೂಡ ಸ್ಥಾಪನೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶ ಆಗುತ್ತಿದೆ. ಉತ್ತರ ಭಾರತದಲ್ಲಿ ಮೂರು ಕಡೆ ಎನ್ ಡಿಎ ಸರ್ಕಾರ ರಚನೆ ಮಾಡಿದೆ. ಕಾಂಗ್ರೆಸ್ ಉತ್ತರ ಭಾರತದಲ್ಲಿ ಮುಗ್ಗರಿಸಿದೆ. ಜಿಲ್ಲೆಯ ಎಲ್ಲ ಅಭ್ಯರ್ಥಿಗಳನ್ನ ಗೆಲ್ಲಿಸಿ. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ತನ್ನಿ ಎಂದರು…

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago