BREAKING NEWS

ಅಂಗಾಂಗ ದಾನಕ್ಕೆ ಮುಂದಾಗಿ: ಮನ್ ಕಿ ಬಾತ್‌’ನ 99ನೇ ಸಂಚಿಕೆಯಲ್ಲಿ ಪ್ರಧಾನಿ ಮನವಿ

ನವದೆಹಲಿ: ‘ಒಬ್ಬರ ಜೀವವನ್ನು ಉಳಿಸುವ ಅಂಗಾಂಗ ದಾನಕ್ಕೆ ಜನರು ಹೆಚ್ಚು ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್‌’ನ 99ನೇ ಸಂಚಿಕೆಯಲ್ಲಿ ಭಾನುವಾರ ಮನವಿ ಮಾಡಿದ್ದಾರೆ.

‘ಅಂಗಾಂಗ ದಾನಕ್ಕೆ ಸರ್ಕಾರವು ಏಕರೂಪದ ನೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದಾನ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ‘ತಮ್ಮ ಸಾವಿನ ಬಳಿಕ ಅಂಗಾಂಗ ದಾನ ಮಾಡುವವರನ್ನು ಅಂಗಾಂಗ ಸ್ವೀಕಾರ ಮಾಡುವವರು ‘ದೇವರು’ ಎಂದೇ ಭಾವಿಸುತ್ತಾರೆ. ಹಾಗಾಗಿ ಹಲವರಿಗೆ ಜೀವ ಮತ್ತು ಬದುಕು ನೀಡುವ ಈ ಕಾರ್ಯಕ್ಕೆ ಜನರಿಂದ ಉತ್ತೇಜನ ದೊರೆಯಬೇಕು’ ಎಂದೂ ಅವರು ಹೇಳಿದ್ದಾರೆ.

‘ಭಾರತದಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಉಂಟಾಗುತ್ತಿರುವುದು ಸಮಾಧಾನಕರ ಅಂಶ’ ಎಂದು ಶ್ಲಾಘಿಸಿದ ಮೋದಿ, ಅಗತ್ಯವಿರುವವರು ದೇಶದಲ್ಲಿ ಎಲ್ಲಿ ಬೇಕಾದರೂ ಅಂಗಾಂಗಗಳನ್ನು ಸ್ವೀಕರಿಸಲು ಇದ್ದ ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಅಂಗಾಂಗ ದಾನ ಮಾಡಲು 65 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಾನದಂಡಗಳನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಒಬ್ಬ ಮೃತ ವ್ಯಕ್ತಿಯ ಅಂಗಾಂಗ ದಾನವು 8ರಿಂದ 9 ಜನರಿಗೆ ಸಹಾಯಕವಾಗಬಲ್ಲದು’ ಎಂದು ವಿವರಿಸಿದ್ದಾರೆ.

‘ದೇಶದಲ್ಲಿ 2013ರಲ್ಲಿ ಅಂಗಾಂಗ ದಾನಿಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆ ಇತ್ತು. 2022ರಲ್ಲಿ ಈ ಸಂಖ್ಯೆಯು 15 ಸಾವಿರಕ್ಕೇರಿದೆ’ಎಂದರು.

ಜನಿಸಿದ 39 ದಿನಗಳ ಬಳಿಕ ಸಾವಿಗೀಡಾದ ತಮ್ಮ ಮಗಳ ಅಂಗಾಂಗಗಳನ್ನು ದಾನ ಮಾಡಿದ ಅಮೃತಸರದ ದಂಪತಿ ಜತೆಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಅವರ ನಿರ್ಧಾರವನ್ನು ಶ್ಲಾಘಿಸಿದರು.

ಕೆಲವೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಅವರು, ಈ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು.

ಕಾಶಿಯಲ್ಲಿ ‘ಕಾಶಿ–ತಮಿಳು ಸಂಗಮಂ’ ನಡೆದಿದೆ. ಅಂತೆಯೇ ಏಪ್ರಿಲ್ 17ರಿಂದ 30ರ ತನಕ ಗುಜರಾತ್‌ನ ವಿವಿಧ ಭಾಗಗಳಲ್ಲಿ ‘ಸೌರಾಷ್ಟ್ರ– ತಮಿಳು ಸಂಗಮಂ’ ನಡೆಯಲಿದೆ ಎಂದು ಮಾಹಿತಿ ನೀಡಿದರು.‌

ಮುಂದಿನ ತಿಂಗಳು ‘ಮನ್ ಕಿ ಬಾತ್’ ಮಾಸಿಕ ಕಾರ್ಯಕ್ರಮದ 100ನೇ ಸಂಚಿಕೆ ನಡೆಯಲಿದ್ದು, ಜನರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆಯೂ ಮೋದಿ ಮನವಿ ಮಾಡಿದ್ದಾರೆ.

 

ನಾರಿಶಕ್ತಿಯ ಶ್ಲಾಘನೆ

ನವದೆಹಲಿ: ‘ಮನ್ ಕಿ ಬಾತ್’ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿ ಭಾರತದ ನಾರಿಶಕ್ತಿಯ ಬಗ್ಗೆ ಪ್ರಧಾನಿ ಮೋದಿ ಅವರು ಶ್ಲಾಘಿಸಿದರು.

‘ಏಷ್ಯಾದ ಮೊದಲ ಮಹಿಳಾ ಲೋಕೊಪೈಲಟ್ ಸುರೇಖಾ ಯಾದವ್ ಅವರು, ಹೊಸದಾಗಿ ಪರಿಚಯಿಸಿರುವ ಸೆಮಿ ಹೈಸ್ಪೀಡ್ ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ ರೈಲನ್ನು ಚಾಲನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತೆಯೇ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದ ಮೂಲಕ ನಿರ್ಮಾಪಕಿ ‌ಗುನೀತ್ ಮೊಂಗಾ ಹಾಗೂ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಅವರು ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ದೇಶಕ್ಕೆ ಗೌರವ ತಂದುಕೊಟ್ಟರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಟರ್ಕಿಯಲ್ಲಿ ಸಂಭವಿಸಿದ ಭೂಕಂಪ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತವು ಕಳುಹಿಸಿದ್ದ ಎನ್‌ಡಿಆರ್‌ಎಫ್ ತಂಡದಲ್ಲಿದ್ದ ಮಹಿಳೆಯರ ಪಾತ್ರವನ್ನು ಶ್ಲಾಘಿಸಿದ ಮೋದಿ, ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಭಾರತ ಮಾತ್ರ ಮಹಿಳಾ ತುಕಡಿಯನ್ನು ನಿಯೋಜಿಸಿದೆ ಎಂದೂ ತಿಳಿಸಿದರು.

andolanait

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

19 mins ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

27 mins ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

43 mins ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

58 mins ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

1 hour ago

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

2 hours ago