ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು. ನನ್ನ ಹೈ ಕಮಾಂಡ್ ನನ್ನ ಜನತೆ. ಜನತೆ ತೀರ್ಮಾನಕ್ಕೆ ಬದ್ಧನಾಗಿದ್ದು ತಕ್ಷಣ ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.
ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಲಕ್ಷ್ಮಣ ಸವದಿ, ‘ನನ್ನೊಂದಿಗೆ ಸ್ನೇಹದಿಂದ ಇದ್ದ, ಪ್ರೀತಿಯಿಂದ ನೋಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಎರಡನೇ ಬಾರಿಗೆ ಸಿಎಂ ಆಗುವ ಭಾಗ್ಯ ಇಲ್ಲ. ಪ್ರಧಾನಿ ಆಗುವ ಯೋಗ ಇದೆ. ಇದೆಲ್ಲದರ ನಡುವೆ ನನಗೂ ಒಬ್ಬರು ಗುರು ಇದ್ದಾರೆ. ಅವರ ಮಾತು ಮೀರುವ ಪರಿಸ್ಥಿತಿ ಬಂದಿದೆ. ಕ್ಷಮಿಸಿ ಗುರುವೇ’ ಎಂದು ಸಿಎಂ ವಿರುದ್ಧವೂ ಪರೋಕ್ಷವಾಗಿ ಮಾತಿನ ತಿರುಗೇಟು ಕೊಟ್ಟರು.
ಪಕ್ಷಾಂತರ ವಿಷಯವಾಗಿ ಪ್ರತಿಕ್ರಿಯಿಸಿದ ಸವದಿ, ‘ಇಷ್ಟೆಲ್ಲ ಆದರೂ ಬಿಜೆಪಿ ವರಿಷ್ಟರಾರೂ ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಇತರ ಪಕ್ಷಗಳ ಅನೇಕ ಮುಖಂಡರು ಸಂಪರ್ಕದಲ್ಲಿದ್ದಾರೆ. ನಾಳೆಯೇ ಗಟ್ಟಿ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಪಕ್ಷ ಬದಲಾವಣೆಯ ಮುನ್ಸೂಚನೆ ನೀಡಿದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…