ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು. ನನ್ನ ಹೈ ಕಮಾಂಡ್ ನನ್ನ ಜನತೆ. ಜನತೆ ತೀರ್ಮಾನಕ್ಕೆ ಬದ್ಧನಾಗಿದ್ದು ತಕ್ಷಣ ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.
ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಲಕ್ಷ್ಮಣ ಸವದಿ, ‘ನನ್ನೊಂದಿಗೆ ಸ್ನೇಹದಿಂದ ಇದ್ದ, ಪ್ರೀತಿಯಿಂದ ನೋಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಎರಡನೇ ಬಾರಿಗೆ ಸಿಎಂ ಆಗುವ ಭಾಗ್ಯ ಇಲ್ಲ. ಪ್ರಧಾನಿ ಆಗುವ ಯೋಗ ಇದೆ. ಇದೆಲ್ಲದರ ನಡುವೆ ನನಗೂ ಒಬ್ಬರು ಗುರು ಇದ್ದಾರೆ. ಅವರ ಮಾತು ಮೀರುವ ಪರಿಸ್ಥಿತಿ ಬಂದಿದೆ. ಕ್ಷಮಿಸಿ ಗುರುವೇ’ ಎಂದು ಸಿಎಂ ವಿರುದ್ಧವೂ ಪರೋಕ್ಷವಾಗಿ ಮಾತಿನ ತಿರುಗೇಟು ಕೊಟ್ಟರು.
ಪಕ್ಷಾಂತರ ವಿಷಯವಾಗಿ ಪ್ರತಿಕ್ರಿಯಿಸಿದ ಸವದಿ, ‘ಇಷ್ಟೆಲ್ಲ ಆದರೂ ಬಿಜೆಪಿ ವರಿಷ್ಟರಾರೂ ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಇತರ ಪಕ್ಷಗಳ ಅನೇಕ ಮುಖಂಡರು ಸಂಪರ್ಕದಲ್ಲಿದ್ದಾರೆ. ನಾಳೆಯೇ ಗಟ್ಟಿ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಪಕ್ಷ ಬದಲಾವಣೆಯ ಮುನ್ಸೂಚನೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…