BREAKING NEWS

ಬಿಜೆಪಿಗೆ ಲಕ್ಷ್ಮಣ ಸವದಿ ಗುಡ್ ಬೈ

ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು. ನನ್ನ ಹೈ ಕಮಾಂಡ್ ನನ್ನ ಜನತೆ. ಜನತೆ ತೀರ್ಮಾನಕ್ಕೆ ಬದ್ಧನಾಗಿದ್ದು ತಕ್ಷಣ ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಲಕ್ಷ್ಮಣ ಸವದಿ, ‘ನನ್ನೊಂದಿಗೆ ಸ್ನೇಹದಿಂದ ಇದ್ದ, ಪ್ರೀತಿಯಿಂದ ನೋಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಎರಡನೇ ಬಾರಿಗೆ ಸಿಎಂ ಆಗುವ ಭಾಗ್ಯ ಇಲ್ಲ. ಪ್ರಧಾನಿ ಆಗುವ ಯೋಗ ಇದೆ. ಇದೆಲ್ಲದರ ನಡುವೆ ನನಗೂ ಒಬ್ಬರು ಗುರು ಇದ್ದಾರೆ. ಅವರ ಮಾತು ಮೀರುವ ಪರಿಸ್ಥಿತಿ ಬಂದಿದೆ. ಕ್ಷಮಿಸಿ ಗುರುವೇ’ ಎಂದು ಸಿಎಂ ವಿರುದ್ಧವೂ ಪರೋಕ್ಷವಾಗಿ ಮಾತಿನ ತಿರುಗೇಟು ಕೊಟ್ಟರು.
ಪಕ್ಷಾಂತರ ವಿಷಯವಾಗಿ ಪ್ರತಿಕ್ರಿಯಿಸಿದ ಸವದಿ, ‘ಇಷ್ಟೆಲ್ಲ ಆದರೂ ಬಿಜೆಪಿ ವರಿಷ್ಟರಾರೂ ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಇತರ ಪಕ್ಷಗಳ ಅನೇಕ ಮುಖಂಡರು ಸಂಪರ್ಕದಲ್ಲಿದ್ದಾರೆ. ನಾಳೆಯೇ ಗಟ್ಟಿ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಪಕ್ಷ ಬದಲಾವಣೆಯ ಮುನ್ಸೂಚನೆ ನೀಡಿದರು.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

13 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

17 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

18 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

18 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

18 hours ago