BREAKING NEWS

ಜನರ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಬಿಜೆಪಿಯಿಂದ ಯುಸಿಸಿ ಎಂಬ ಗೂಗ್ಲಿ: ಸಚಿನ್ ಪೈಲಟ್

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಸಿಟ್ಟಿಗೆದ್ದಿರುವ ಸಚಿನ್ ಪೈಲಟ್, ಗೆಹ್ಲೋಟ್ ಜೊತೆ ಕಾಂಗ್ರೆಸ್ ಹೈಕಮಾಂಡ್ ರಾಜಿ ಮಾಡಿದ ನಂತರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಯಾವುದೇ ಕಾಂಕ್ರೀಟ್ ಪ್ರಸ್ತಾಪವಿಲ್ಲದೆ ಯುಸಿಸಿ ಬಗ್ಗೆ ಮಾತನಾಡುವುದು ತುಂಬಾ ವ್ಯಂಗ್ಯವಾಡಿದರು.

ಹಣದುಬ್ಬರ, ಬಡತನ ಮತ್ತು ಇತರ ಗಂಭೀರ ವಿಷಯಗಳನ್ನು ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಉದ್ದೇಶಪೂರ್ವಕವಾಗಿ ಯುಸಿಸಿಯ ಗೂಗ್ಲಿಯನ್ನು ಸಾರ್ವಜನಿಕರ ಮುಂದೆ ಎಸೆದಿದೆ. ಆದರೆ ಇದು ಯಾವುದೇ ವಿಶೇಷ ಪರಿಣಾಮ ಬೀರುವುದಿಲ್ಲ, ಸಾರ್ವಜನಿಕರು ತಮ್ಮ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಸಚಿನ್ ಪೈಲಟ್, ಯುಸಿಸಿಗೆ ಸಂಬಂಧಿಸಿದಂತೆ ಸರ್ಕಾರವು ಇನ್ನೂ ಯಾವುದೇ ಪ್ರಸ್ತಾವನೆ ಅಥವಾ ನೀಲನಕ್ಷೆಯನ್ನು ಹೊರತಂದಿಲ್ಲ, ಆದರೆ ಅದು ಖಂಡಿತವಾಗಿಯೂ ಅದನ್ನು ರಾಜಕೀಯ ಸಾಧನವಾಗಿ ಬಳಸುತ್ತಿದೆ ಎಂದು ಆರೋಪಿಸಿದರು. ಯುಸಿಸಿ ಮತ್ತು ಕಾಂಗ್ರೆಸ್‌ನ ನಿಲುವಿನ ಕುರಿತು ಚರ್ಚೆಯ ಬಗ್ಗೆ ಕೇಳಿದಾಗ, ಪೈಲಟ್, ‘ಏಕರೂಪ ನಾಗರಿಕ ಸಂಹಿತೆ, ಯಾವುದೇ ಮಸೂದೆ ಬಂದಿದೆಯೇ, ಯಾವುದೇ ಪ್ರಸ್ತಾವನೆ ಬಂದಿದೆಯೇ, ಯಾವುದೇ ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆಯೇ, ನನಗೆ ಗೊತ್ತಿಲ್ಲ’ ಎಂದು ಪೈಲಟ್ ಹೇಳಿದರು. ಯುಸಿಸಿ ಹೆಸರಿನಲ್ಲಿ ವಿವಿಧ ಜನರು, ವಿವಿಧ ಪಕ್ಷಗಳು, ವಿವಿಧ ಧಾರ್ಮಿಕ ಮುಖಂಡರು ತಮ್ಮ ಅಭಿಪ್ರಾಯವನ್ನು ನೀಡುತ್ತಿದ್ದಾರೆ ಎಂದರು.

ಯಾವುದೇ ಕಾಂಕ್ರೀಟ್ ಪ್ರಸ್ತಾಪವಿಲ್ಲದೆ ಯುಸಿಸಿಯಲ್ಲಿ ಮಾತನಾಡುವುದು ಗಾಳಿಯಲ್ಲಿ ಬಾಣ ಬಿಟ್ಟಂತೆ ಎಂದು ಸಚಿನ್ ಪೈಲಟ್ ಹೇಳಿದರು. ಈ ವೇಳೆ ಅವರು ಯುಸಿಸಿ ಬಗ್ಗೆ ಲೇವಡಿ ಮಾಡಿದ ಅವರು, ಸರ್ಕಾರವು ಯುಸಿಸಿಯಂತ ಗೂಗ್ಲಿ ಹಾಕಿದೆ. ಅದರ ಬಗ್ಗೆ ಚರ್ಚೆ, ವಾದ ನಡಿಬೇಕು ಎಂಬುದೇ ಅವರ ಉದ್ದೇಶ. ಯುಸಿಸಿ ಪ್ರಸ್ತಾಪದ ಬಗ್ಗೆ ಯಾರಿಗೂ ಏನೂ ತಿಳಿದಿಲ್ಲ ಎಂದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

1 hour ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

4 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago