BREAKING NEWS

ಶಾಲೆಗಳಲ್ಲಿ ‘ಸಂಭ್ರಮ ಶನಿವಾರ’ ಆಚರಣೆಗೆ ಸರ್ಕಾರ ಸುತ್ತೋಲೆ: ವಿಶೇಷತೆ ಏನು.?

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.

ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

andolanait

Recent Posts

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

4 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

18 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

22 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 hour ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

5 hours ago