BREAKING NEWS

ಶಾಲೆಗಳಲ್ಲಿ ‘ಸಂಭ್ರಮ ಶನಿವಾರ’ ಆಚರಣೆಗೆ ಸರ್ಕಾರ ಸುತ್ತೋಲೆ: ವಿಶೇಷತೆ ಏನು.?

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.

ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

andolanait

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

16 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

25 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

34 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

39 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

49 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

58 mins ago